ಕಾಂಗ್ರೆಸ್‌ನಲ್ಲಿ ಒಡಕಿದೆ ಎಂಬ ಸಂದೇಶ ರವಾನೆ: ಡಾ. ಯತೀಂದ್ರ

ಮೈಸೂರು: ಮೇಯರ್‌ ಆಯ್ಕೆ ಸಂದರ್ಭದಲ್ಲಿ ನಡೆದ ಬೆಳವಣಿಗೆಗಳಿಂದ ಕಾಂಗ್ರೆಸ್‌ನಲ್ಲಿ ಒಡಕಿದೆ ಎಂಬ ಸಂದೇಶ ರವಾನೆಯಾಗಿದೆ ಎಂದು ವರುಣಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಹೇಳಿದರು.
ಮೇಯರ್‌ ಚುನಾವಣೆ ಸಂದರ್ಭದಲ್ಲಿ ನಡೆದ ಬೆಳವಣಿಗೆಗೆಳು ದುರದೃಷ್ಟಕರ. ಪಕ್ಷದ ನಾಯಕರೊಬ್ಬರಿಗೆ ಹಿನ್ನಡೆಯಾಗಬೇಕೆಂಬ ಏಕೈಕ ಉದ್ದೇಶದಿಂದ ನಮ್ಮ ಪಕ್ಷದ ಮುಖಂಡರೇ ಮಾಡಿದ ಕೆಲಸ ಇದಾಗಿದೆ ಎಂದರು. ಪಕ್ಷದಲ್ಲಿ ಇಂಥ ಘಟನೆಗಳು ಎಲ್ಲಿಯೂ ಮರುಕಳಿಸಬಾರದು. ಎಲ್ಲ ಮುಖಂಡರು ಒಗ್ಗಟ್ಟಾಗಿರುವಂತೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಕಾರ್ಯಾಧ್ಯಕ್ಷರು ನೋಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

ನಿಮ್ಮ ಕಾಮೆಂಟ್ ಬರೆಯಿರಿ

advertisement