ಮೈಸೂರು: ಎಸಿಬಿ ಬಲೆಗೆ ಬಿದ್ದ ಪಿಡಿಒ-ಎಸ್‌ಡಿಎ

ಮೈಸೂರು: ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆ ತಾಲೂಕಿನಲ್ಲಿ ಲಂಚ ಪಡೆಯುತ್ತಿದ್ದ ಪಂಚಾಯತ ಅಭಿವೃದ್ಧಿ ಅಧಿಕಾರಿ ಹಾಗೂ ದ್ವಿತಿಯ ದರ್ಜೆ ಸಹಾಯಕ ಎಸಿಬಿ ಬಲೆಗೆ ಬಿದ್ದಿದ್ದಾರೆ.
ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಿವೇಶನವೊಂದರ ಖಾತೆ ಬದಲಾವಣೆಗೆ ೩೦,೦೦೦ರೂ. ಲಂಚ ಕೇಳಿದ್ದರು. ಈ ಕುರಿತು ಕೇಶರಾಮ್‌ ಎಂಬುವವರು ಎಸಿಬಿಗೆ ದೂರು ನೀಡಿದ್ದರು. ಶುಕ್ರವಾರ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪಿಡಿಒ ಲೋಕೇಶ ಹಾಗೂ ದ್ವಿತಿಯ ದರ್ಜೆ ಸಹಾಯಕ ವೆಂಕಟೇಶ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೈಸೂರು ಭ್ರಷ್ಟಾಚಾರ ನಿಗ್ರಹದಳದ ಎಸ್‌.ಪಿ. ಅರುಣಾಂಶಗಿರಿ ಮಾರ್ಗದರ್ಶನದಲ್ಲಿ ಡಿಎಸ್ಪಿ ಪರಶುರಾಮಪ್ಪ, ಪೊಲೀಸ್‌ ನಿರೀಕ್ಷಕ ಕರೀಮ್‌ ರಾವತರ ಹಗೂ ಕೆ.ಎಸ್‌.ನಿರಂಜನ ದಾಳಿ ನಡೆಸಿದರು.
ಕಳೆದ ಹಲವು ದಿನಗಳಿಂದ ಈ ಇಬ್ಬರ ಮೇಲೆ ಸಾಕಷ್ಟು ದೂರುಗಳು ಕೇಳಿಬಂದಿದ್ದವು. ಆದರೆ ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಇತ್ತು. ಇಬ್ಬರು ಸಾಕ್ಷಿಸಮೇತ ಸಿಕ್ಕಿಬಿದ್ದಿದ್ದು ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement