೩ ದಿನಗಳಿಂದ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

ಕಲಬುರ್ಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಚಾಮನೂರು ನರಿಬೋಳ ಗ್ರಾಮದ ಬಳಿಯ ನಿರ್ಮಾಣ ಹಂತದ ಬ್ರಿಡ್ಜ್‌ ಬಳಿ ಶನಿವಾರ ಕೊಳೆತ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ.
ಬಾಲಕನನ್ನು ನರಿಬೋಳ ಗ್ರಾಮದ ಮಹೇಶ (೧೪) ಎಂದು ಗುರುತಿಸಲಾಗಿದೆ. ಈತ ಕಳೆದ ೩ ದಿನಗಳಿಂದ ಗ್ರಾಮದಿಂದ ನಾಪತ್ತೆಯಾಗಿದ್ದ. ಈತನ ಮರ್ಮಾಂಗಕ್ಕೆ ಗಾಯ ಮಾಡಿ ಗೋಣಿಚೀಲದಲ್ಲಿ ಹಾಕಿ ಭೀಮಾ ನದಿಗೆ ಎಸೆಯಲಾಗಿದೆ.
ನರಿಬೋಳ ಗ್ರಾಮದ ಮಹೇಶ್‌ ಇದೇ ಗ್ರಾಮದ ಅನ್ಯ ಕೋಮಿನ ಬಾಲಕಿಯೊಂದಿಗೆ ಅತ್ಯಂತ ಸಲುಗೆಯಿಂದ ಇದ್ದ ಎಂದು ಹೇಳಲಾಗಿದೆ. ಇದರಿಂದಾಗಿ ಯುವತಿಯ ಕುಟುಂಬಸ್ಥರು ಮಹೇಶನನ್ನು ಅಪಹರಣ ಮಾಡಿ ಕೊಲೆ ಮಾಡಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.
ಈ ಕುರಿತು ಮೆಹೆಬೂಬ್ ಸೇರಿದಂತೆ ಮೂವರು ಶಂಕಿತರನ್ನು ಜೇವರ್ಗಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಕಳೆದ 3 ದಿನಗಳ ಹಿಂದೆ ಕೊಲೆ ಮಾಡಿ ಬಿಸಾಡಿದ ಗೋಣಿ ಚೀಲ ಇಂದು ಬೆಳಗಿನ ಜಾವ ನಿರ್ಮಾಣ ಹಂತದಲ್ಲಿರುವ ಬ್ರಿಡ್ಜ್ ಗೋಡೆಗಳ ಮಧ್ಯೆ ಪತ್ತೆಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಜೇವರ್ಗಿ ಪೊಲಿಸರು ಗೋಣಿ ಚೀಲವನ್ನು ತೆಗೆದು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಬಾಲಕನ ದೇಹ ಪತ್ತೆಯಾಗಿದೆ.

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement