ಜೈಲಿನಿಂದ ಹೊರಬಂದು ಮತ್ತೆ ರೈತ ಹೋರಾಟಕ್ಕೆ ಸಜ್ಜಾದ ನೋದೀಪ್‌ ಕೌರ್‌

ಹಿಂಸಾತ್ಮಕ ಪ್ರತಿಭಟನೆಗೆ ಕಾರಣರೆಂಬ ಆರೋಪಕ್ಕೆ ೪೫ ದಿನಗಳ ಕಾರಾಗೃಹವಾಸ ಪೂರ್ಣಗೊಳಿಸಿ ಬಿಡುಗಡೆಗೊಂಡಿರುವ ಸಾಮಾಜಿಕ ಕಾರ್ಯಕರ್ತೆ ನೋದೀಪ್‌ ಕೌರ್‌ (೨೩) ರೈತರ ಹೋರಾಟದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ.
ಕರ್ನಾಲ್‌ ಜೈಲಿನಿಂದ ಶುಕ್ರವಾರ ಬಿಡುಗಡೆಗೊಂಡ ನೋದೀಪ್‌, ತಾನು ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಮತ್ತು ರೈತರು, ಕಾರ್ಮಿಕರು ಮತ್ತು ಮಹಿಳೆಯರ ಹಕ್ಕುಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ಮುಂದುವರಿಸುವುದಾಗಿ ಹೇಳಿದ್ದಾರೆ.
ನಾನು ಜೈಲಿನಿಂದ ಹೊರಬಂದಿದ್ದೇನೆ, ನಾನು ಜನರಿಗೆ ಸಹಾಯ ಮಾಡುತ್ತಿದ್ದೇನೆ, ನಾನು ಏನಾದರೂ ತಪ್ಪು ಮಾಡಿದ್ದರೆ, ಜನರು ನನ್ನ ಪರವಾಗಿ ಮಾತನಾಡುತ್ತಿರಲಿಲ್ಲ. ನನ್ನನ್ನು ಬೆಂಬಲಿಸಿ ಮಾತನಾಡಿದ ಎಲ್ಲರಿಗೂ ಧನ್ಯವಾದ ತಿಳಿಸಿದರು.
ಜನವರಿ 12 ರಂದು ಕೌರ್ ವಿರುದ್ಧ ಎರಡು ಎಫ್‌ಐಆರ್ ದಾಖಲಿಸಲಾಗಿದೆ – ಒಂದು ಕೌರ್ ಮತ್ತು ಇತರರು ಪ್ರತಿಭಟಿಸಿದ ಕಾರ್ಖಾನೆಯ ಅಕೌಂಟೆಂಟ್ ನೀಡಿದ ದೂರಿನ ಆಧಾರದ ಮೇಲೆ, ಮತ್ತು ಇನ್ನೊಂದರಲ್ಲಿ ಆಕೆಯ ಮೇಲೆ ಕೊಲೆ ಯತ್ನದ ಆರೋಪ ಹೊರಿಸಲಾಗಿತ್ತು. ಕಳೆದ ವರ್ಷ ಡಿಸೆಂಬರ್‌ನಲ್ಲಿಯೂ ಕೌರ್ ವಿರುದ್ಧ ಗಲಭೆ ಮತ್ತು ಸುಲಿಗೆ ಪ್ರಕರಣದಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಇದರಲ್ಲಿ ಆಕೆಗೆ ಜಾಮೀನು ನೀಡಲಾಯಿತು.
ಕೌರ್ ಅವರ “ಅಕ್ರಮ ಬಂಧನ” ಆರೋಪದ ಬಗ್ಗೆ ಸೊಮೊಟೊ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯವು ಏಪ್ರಿಲ್ 22 ಕ್ಕೆ ಮುಂದೂಡಿದೆ. ಹರಿಯಾಣ ಪೊಲೀಸರು ಕೌರ್ ಅವರ ಅಕ್ರಮ ಬಂಧನಕ್ಕೆ ಸಂಬಂಧಿಸಿದಂತೆ ದೂರುಗಳನ್ನು ಸ್ವೀಕರಿಸಿದ ನಂತರ ಹೈಕೋರ್ಟ್ ಕೌರ್ ವಿಷಯವನ್ನು ಕೈಗೆತ್ತಿಕೊಂಡಿದೆ.

ಪ್ರಮುಖ ಸುದ್ದಿ :-   ಮಣಿಪುರ : ಮತಗಟ್ಟೆ ಮೇಲೆ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement