ಬೆಂಗಳೂರು: ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ (ಮಾರ್ಚ್ 1) ಪ್ರಕರಣಕ್ಕೆ ಸಂತಾಪ ಸೂಚಿಸಿರುವ ನಟ ನಾಯಕ ಜಗ್ಗೇಶ್ ಮಕ್ಕಳ ದುರ್ಬಲ ಮನಸ್ಸಿನ ಬಗ್ಗೆ ಮರುಕಪಟ್ಟಿದ್ದಾರೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಬಿಇ ಮೂರನೇ ಸೆಮಿಸ್ಟರ್ ಓದುತ್ತಿದ್ದ ಜಯಂತ್ ರೆಡ್ಡಿ, ಸೋಮವಾರ ಕಾಲೇಜಿನ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಜಯಂತ್ ರೆಡ್ಡಿ ಆತ್ಮಹತ್ಯೆ ನಿಲುವು ಕಂಡು ದುಃಖವಾಯಿತು ಎಂದಿರುವ ಜಗ್ಗೇಶ್, ನೀ ಒಬ್ಬನೆ ಸಾಯಲಿಲ್ಲಾ ಕಂದ ತಂದೆ-ತಾಯಿ ಬಂಧುಮಿತ್ರರ ಕೊಂದು ಬಿಟ್ಟೆ. ಈಸಬೇಕು ಇದ್ದು ಜಯಿಸಬೇಕು. ಇಂದಿನ ಪೋಷಕರು ತಮ್ಮ ಮಕ್ಕಳಿಗೆ ಬಾಹ್ಯ ವಿದ್ಯೆಗಿಂತ ಸ್ಥಿತಪ್ರಜ್ಞತೆ ಹಾಗೂ ಆಂತರ್ಯ ಗಟ್ಟಿಯಾಗುವ ವಿದ್ಯೆ ಕಲಿಸಬೇಕು. ಮಕ್ಕಳಿಗೆ ಆಸ್ತಿ ಮಾಡದೆ, ಮಕ್ಕಳನ್ನೆ ಆಸ್ತಿ ಮಾಡಿ ಎಂದು ಪಾಲಕರಿಗೆ ಕಿವಿ ಮಾತು ಹೇಳಿ ಟ್ವೀಟ್ ಮಾಡಿದ್ದಾರೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ