ಬಿಜೆಪಿ ಭ್ರಷ್ಟಾಚಾರದ ಪರ ನಿಂತಿದೆ: ಸ್ಟಾಲಿನ್‌

ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಬಿಜೆಪಿ ಭ್ರಷ್ಟಾಚಾರದ ಪರ ನಿಂತಿದೆ ಎಂದು ಡಿಎಂಕೆ ಮುಖಂಡ ಎಂ.ಕೆ. ಸ್ಟಾಲಿನ್‌ ಆರೋಪಿಸಿದರು.
ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಪನ್ನೀರಸೆಲ್ವಂ ಕಮೀಶನ್‌, ಕಲೆಕ್ಷನ್‌, ಕರಪ್ಷನ್‌ ಮಾಡುವ ಮೂಲಕ ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಬಿಜೆಪಿ ಇಂಥವರನ್ನು ಬೆಂಬಲಿಸುತ್ತಿದೆ ಎಂದರು.
ಡಿಎಂಕೆ ನೇತೃತ್ವದ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಪ್ರಕ್ರಿಯೆ ರವಿವಾರದಿಂದ ಆರಂಭಗೊಂಡಿದೆ. ಪಕ್ಷದ ಪ್ರಣಳಿಕೆ ಸಿದ್ಧವಾಗುತ್ತಿದೆ ಎಂದು ಸ್ಟಾಲಿನ್‌ ಹೇಳಿದರು.
ಇತ್ತೀಚಿಗೆ ತಮಿಳುನಾಡಿನಲ್ಲಿ ನಡೆದ ರ್ಯಾಲಿಯಲ್ಲಿ ಗೃಹ ಸಚಿವ ಅಮಿತ್‌ ಶಾ, ೨ಜಿ ತರಂಗಾಂತರ ಹಂಚಿಕೆ ಮಾಡಿದವರು ಯಾರು? ಎಂದು ಪ್ರಶ್ನಿಸಿದರಲ್ಲದೇ ಈ ಪ್ರಕರಣಗಳಲ್ಲಿ ಒಳ ಹೊಕ್ಕು ನೋಡಿದರೆ ಸತ್ಯ ಗೊತ್ತಾಗುತ್ತದೆ. ಕಾಂಗ್ರೆಸ್‌ ಪಕ್ಷ ಹಗರಣ ಮಾಡಿದಾಗ ಡಿಎಂಕೆ ಮೈತ್ರಿಪಕ್ಷವಾಗಿತ್ತು ಎಂದು ಆರೋಪ ಮಾಡಿದ್ದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

ನಿಮ್ಮ ಕಾಮೆಂಟ್ ಬರೆಯಿರಿ

advertisement