ಅಪಘಾತದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಚಿಟ್ಟಾಣಿಗೆ ಗಂಭೀರ ಗಾಯ

ಹೊನ್ನಾವರ: ರಸ್ತೆ ಅಪಘಾತದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕರೆದೊಯ್ಯಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಡಿನಬಾಳದಲ್ಲಿ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೊನ್ನಾವರದಲ್ಲಿ ಚಿಕಿತ್ಸೆ ಕೊಡಿಸಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕರೆದೊಯ್ಯಲಾಗಿದೆ. ಅವರ ಮುಖದ ಭಾಗಕ್ಕೆ ಸ್ವಲ ಗಾಯಗಳಾಗಿದ್ದು ಎನ್ನಲಾಗಿದ್ದು, ಮಣಿಪಾಲದ ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯದ ಮಟ್ಟಿಗೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರ ಕುಟುಂಬದ ಸಮೀಪವರ್ತಿಗಳು ತಿಳಿಸಿದ್ದಾರೆ.

3 / 5. 5

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement