ಅರ್ಚಕ ನೌಕರಿ ಬ್ರಾಹ್ಮಣರಿಗೆ ಮೀಸಲಿಡಬೇಕು

ಮೈಸೂರು: ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಿಗೆ ರಾಜ್ಯ ಸರ್ಕಾರವು ಸಮಾಜದ ಎಲ್ಲಾ ವರ್ಗದ ಜನರನ್ನು ಅರ್ಚಕರನ್ನಾಗಿ ನೇಮಿಸುತ್ತಿದೆ, ಸರ್ಕಾರ ಹೀಗೆ ಮಾಡದೇ ಕೇವಲ ಬ್ರಾಹ್ಮಣ ಸಮುದಾಯಕ್ಕೆ ಮಾತ್ರ ಅರ್ಚಕ ಉದ್ಯೋಗವನ್ನು ಮೀಸಲಿಡಬೇಕು ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಜಿ ತಿಳಿಸಿದ್ದಾರೆ.
ಮೈಸೂರಿನ ಖಾಸಗಿ ಸಭಾಂಗಣದಲ್ಲಿ ಜಿಲ್ಲಾ ಮತ್ತು ನಗರ ಬ್ರಾಹ್ಮಣ ಸಂಘ ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ ವಿಪ್ರ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅರ್ಚಕ ವೃತ್ತಿಯನ್ನು ಬ್ರಾಹ್ಮಣರಿಂದ ಕಿತ್ತು ಕೊಳ್ಳುವ ಪ್ರಯತ್ನ ಸರ್ಕಾರದಿಂದ ನಡೆಯುತ್ತಿದ ಎಂದು ವಿಷಾದಿಸಿದರು.
ಕನ್ನಡ ಸಿನಿಮಾವೊಂದರಲ್ಲಿ ಬ್ರಾಹ್ಮಣರನ್ನು ಅವಹೇಳನವಾಗಿ ತೋರಿಸಲಾಗಿತ್ತು. ಇಂತಹ ಘಟನೆ ಇದೇ ಮೊದಲಲ್ಲ. ಇದಕ್ಕೆ ಪ್ರತಿರೋಧ ನಡೆದಿದ್ದು ಒಳ್ಳೆಯ ಬೆಳವಣಿಗೆಯಾಗಿದ್ದು, ಸಮಾಜ ಜಾಗೃತವಾಗಿದೆ ಎಂಬುದಕ್ಕೆ ಉದಾಹರಣೆ. ಸಿನಿಮಾ ಅವಹೇಳನ ದೃಶ್ಯ ಸಮಾಜದ ಎಲ್ಲರನ್ನೂ ಒಗ್ಗೂಡುವಂತೆ ಮಾಡಿದೆ ಎಂದರು.
ಬ್ರಾಹ್ಮಣರಿಗೆ ಅರ್ಚಕರ ವೃತ್ತಿಯಲ್ಲಿ ಮುಂದುವರಿಯಲು ಅವಕಾಶ ಕೊಡದಿರುವುದು ಬೇಸರದ ಸಂಗತಿ. ಸರ್ಕಾರ ಬ್ರಾಹ್ಮಣರಿಂದ ಅರ್ಚಕ ವೃತ್ತಿಯನ್ನು ಕಿತ್ತು ಕೊಳ್ಳುವ ಪ್ರಯತ್ನ ನಡೆಸುತ್ತಿದೆ. ಈ ಎಲ್ಲಾ ಸಮಸ್ಯೆಗಳೊಳಗೆ ಪರಿಹಾರ ಕಂಡುಕೊಳ್ಳಲು ಸಂಘಟನೆಯೊಂದೇ ಪರಿಹಾರ ಎಂದರು.
ಮಂದಿರ ನಿರ್ಮಾಣಕ್ಕೆ 1,500 ಕೋಟಿ ರೂ. ಅಗತ್ಯವಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಈಗ 2,100 ಕೋಟಿ ರೂ. ಸಂಗ್ರಹವಾಗಿದೆ. ಮಂದಿರ ನಿರ್ಮಾಣ ಮಾಡುವುದು ದೊಡ್ಡ ವಿಷಯವೇನಲ್ಲ. ಆದರೆ ಇಷ್ಟು ಆಸ್ಥೆಯಿಂದ ನಿರ್ಮಿಸಿದ ಮಂದಿರವನ್ನು ಎಷ್ಟು ದಿವಸ ಉಳಿಸಿಕೊಳ್ಳುತ್ತೇವೆ ಎಂಬುದು ಮುಖ್ಯ. ಶ್ರೀ ರಾಮನ ಹೆಸರಿನಲ್ಲಿ ನಮ್ಮ ಸಂಸ್ಕೃತಿ ಪುನರುತ್ಥಾನವಾಗಬೇಕು. ನೀವು ಕಟ್ಟಿದ ಮಂದಿರ ಅದೆಷ್ಟು ಕಾಲ ನಿಮ್ಮ ಕೈಯಲ್ಲಿ ಉಳಿಯುತ್ತದೆ? ಅದು ಮತ್ತೆ ನಮ್ಮ ಕೈಗೆ ಬಂದೇ ಬರುತ್ತದೆ ಎಂಬ ಹೇಳಿಕೆಗಳನ್ನು ಹುಸಿಗೊಳಿಸಬೇಕು ಎಂದು ಹೇಳಿದರು.

ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

2.2 / 5. 6

ಶೇರ್ ಮಾಡಿ :

  1. Geek

    ಹಾಗಿದ್ದರೆ ಬ್ರಾಹ್ಮಣರು ಯಾರು ಸ್ವಾಮಿಗಳೇ? ಹುಟ್ಟಿನಿಂದ ಬ್ರಾಹ್ಮಣರೋ ಅಥವಾ ಆಚಾರದಿಂದ ಬ್ರಾಹ್ಮಣರೋ?

    ಹುಟ್ಟಿನಿಂದ ಬ್ರಾಹ್ಮಣರಿಗೆ ಅರ್ಚಕ ವೃತ್ತಿ ಮೀಸಲಿಡಬೇಕೆಂದರೆ ಬ್ರಾಹ್ಮಣರಿಗೆ ಉಳಿದ ಡಾಕ್ಟರ್, ಇಂಜಿನಿಯರ್ , ಕೃಷಿಕ ಮೊದಲಾದ ಉದ್ಯೋಗಗಳನ್ನು ನಿಷೇಧಿಸುತ್ತೀರಾ?

    ನಿಮ್ಮಂತಹ ಸ್ವಾಮಿಗಳು ನಿಜವಾಗಿಯೂ ಸಮಾಜಕ್ಕೆ ಶಾಪವೇ ಸರಿ.

ನಿಮ್ಮ ಕಾಮೆಂಟ್ ಬರೆಯಿರಿ

advertisement