ಕುರಿಗಾರರ ಹೋರಾಟಕ್ಕೆ ಸಿದ್ದರಾಮಯ್ಯ ಸಾಥ್‌

ಬೆಂಗಳೂರು: ಅನುಗ್ರಹ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ನಡೆದ ಕುರಿಗಾರರ ಪ್ರತಿಭಟನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಥ್‌ ನೀಡಿದರು.
ಕುರಿಗಳು ಸತ್ತರೆ ಪರಿಹಾರ ನೀಡುವ ಅನುಗ್ರಹ ಯೋಜನೆ ಮರು ಜಾರಿ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಣೆದಾರರ ಮಹಾ ಮಂಡಲದಿಂದ ನಡೆದ ಈ ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾಗವಹಿಸಿ ಬೆಂಬಲ ಸೂಚಿಸಿದರು ಕುರಿಗಾಹಿಗಳಿಗೆ ಆರ್ಥಿಕ ಅನುಕೂಲ ಆಗುವ ಅನುಗ್ರಹ ಯೋಜನೆಯನ್ನು ಮತ್ತೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು. ಕೆಲ ದಿನಗಳ ಹಿಂದೆ ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪತ್ರ ಬರೆಯಲಾಗಿತ್ತು ಎಂದರು.
ಕುರಿಗಾಹಿಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವಧಿಯಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ವಿಷಮೇವು ತಿಂದು ಅಥವಾ ಇನ್ನಿತರ ಕಾರಣಗಳಿಂದಾಗಿ ಆಕಸ್ಮಿಕವಾಗಿ ಕುರಿಗಳು ಹಾಗೂ ಇತರ ಜಾನುವಾರುಗಳು ಸತ್ತಾಗ ಪಶುಪಾಲಕರಿಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಯೋಜನೆ ಜಾರಿಗೊಳಿಸಲಾಗಿತ್ತು. ಆದರೆ ಇದೀಗ ಈ ಯೋಜನೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.
ಆಕಸ್ಮಿಕವಾಗಿ ಮರಣ ಹೊಂದಿದ ಕುರಿ, ಮೇಕೆ, ಹಸು, ಎಮ್ಮೆಗಳಿಗೆ ಈ ಹಿಂದೆ ನೀಡುತ್ತಿದ್ದ ಹಾಗೆ 5000 ರಿಂದ 10,000 ರೂಪಾಯಿ ವರೆಗೆ ಪರಿಹಾರ ನೀಡುವಂತೆ ಪತ್ರದ ಮೂಲಕ ಒತ್ತಾಯಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಪ್ರಮುಖ ಸುದ್ದಿ :-   ೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement