ಕೇಂದ್ರೀಯ ತನಿಖಾ ಏಜೆನ್ಸಿಗಳ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ: ಕೇಂದ್ರದ ಮೇಲೆ ಸುಪ್ರೀಂಕೋರ್ಟ್‌ ಅತೃಪ್ತಿ

ನವ ದೆಹಲಿ: ಸಿಬಿಐ, ಇಡಿ ಮತ್ತು ಎನ್ ಐಎ ಒಳಗೊಂಡಂತೆ ತನಿಖಾ ಏಜೆನ್ಸಿಗಳ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾಗಳ ಅಳವಡಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೆಚ್ಚಿನ ಸಮಯಾವಕಾಶ ಕೇಳಿರುವುದಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದೆ.
ನ್ಯಾಯಮೂರ್ತಿ ಆರ್ ಎಫ್ ನಾರಿಮನ್ ನೇತೃತ್ವದ ನ್ಯಾಯಪೀಠ, ಈ ವಿಷಯವು ನಾಗರಿಕರ ಹಕ್ಕುಗಳಿಗೆ ಸಂಬಂಧಿಸಿದೆ ಎಂದು ಅಭಿಪ್ರಾಯಪಟ್ಟಿದೆ. ಈ ವಿಷಯದಲ್ಲಿ ಮುಂದೂಡಿಕೆ ಕೋರಿ, ಕೇಂದ್ರ ಸರ್ಕಾರ ಸಲ್ಲಿಸಿದ ಪತ್ರದಲ್ಲಿ ನೀಡಲಾದ ನೆಪಗಳನ್ನು ಸ್ವೀಕರಿಸಲಾಗದು ಎಂದು ಹೇಳಿದೆ. ಸಿಸಿಟಿವಿ ಅಳವಡಿಸದೆ ಸುಮ್ಮನೆ ಕಾಲಹರಣ ಮಾಡುತ್ತಿದ್ದೀರಿ ಎಂದು ನ್ಯಾಯಾಧೀಶರಾದ ಬಿಆರ್ ಗವಾಯಿ ಮತ್ತು ಹೃಷಿಕೇಶ್ ರಾಯ್ ಅವರನ್ನೊಳಗೊಂಡ ಪೀಠ, ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಹೇಳಿದೆ.
ಸಿಬಿಐ, ರಾಷ್ಟ್ರೀಯ ವಿಚಾರಣಾ ಏಜೆನ್ಸಿ, ಇಡಿ ಮತ್ತಿತರ ಕೇಂದ್ರೀಯ ತನಿಖಾ ಸಂಸ್ಥೆಗಳ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾಗಳು ಮತ್ತು ಹೇಳಿಕೆ ದಾಖಲು ಸಲಕರಣೆಗಳನ್ನು ಅಳವಡಿಸಬೇಕೆಂದು ಕಳೆದ ವರ್ಷದ ಡಿಸೆಂಬರ್ 2 ರಂದು ಅಪೆಕ್ಸ್ ಕೋರ್ಟ್ ನಿರ್ದೇಶನ ನೀಡಿತ್ತು.
ಈ ವಿಚಾರವು ಹೆಚ್ಚಿನ ಪರಿಣಾಮ ಬೀರಬಹುದೆಂದು ತುಷಾರ್ ಮೆಹ್ತಾ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ವಿಚಾರಣೆ ವೇಳೆಯಲ್ಲಿ ಹೇಳಿದರು. ಇದು ನಾಗರಿಕ ಹಕ್ಕಗಳಿಗೆ ಸಂಬಂಧಿಸಿದೆಯೇ ಎಂದು ಕೇಳಿದ ನ್ಯಾಯಾಲಯ, ನೆಪಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿತು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸಲು ಸಮಾಯವಕಾಶವನ್ನು ಮೆಹ್ತಾ ಕೋರಿದರು. ಅಫಿಡವಿಟ್ ಸಲ್ಲಿಸಲು ಮೂರು ವಾರಗಳ ಸಮಾಯವಕಾಶವನ್ನು ಸುಪ್ರೀಂಕೋರ್ಟ್ ನೀಡಿತು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ನನ್ನ ಹೆಸರು ಸಾವರ್ಕರ್ ಅಲ್ಲ...ನಾನು ಗಾಂಧಿ, ಕ್ಷಮೆ ಕೇಳೋಲ್ಲ: ಅನರ್ಹತೆ ಕುರಿತು ರಾಹುಲ್ ಗಾಂಧಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement