ಚುನಾವಣಾ ಫಲಿತಾಂಶಕ್ಕೆ ಮೊದಲೇ ದೀದಿ ಬಿಟ್ಟುಹೋದ್ರಾ ಪ್ರಶಾಂತ್: ಬಿಜೆಪಿ ವ್ಯಂಗ್ಯ

ನವ ದೆಹಲಿ: ಪಂಜಾಬ್‌ನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸಿದ್ಧತೆ ನಡೆಸುತ್ತಿದ್ದು, ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರನ್ನು ಪ್ರಧಾನ ಸಲಹೆಗಾರರಾಗಿ ನೇಮಿಸಿಕೊಂಡಿದ್ದಾರೆ.
ಈ ಕುರಿತು ಬಿಜೆಪಿ ಪ್ರತಿಕ್ರಿಯಿಸಿ “ಪ್ರಶಾಂತ್ ಅವರು ಕಾಂಗ್ರೆಸ್ ಸೇರಲು “ದೀದಿ”ಯನ್ನು ಈಗಲೇ ಬಿಟ್ಟು ಹೋಗಿದ್ದಾರೆ” ಎಂದು ವ್ಯಂಗ್ಯ ಮಾಡಿದೆ.
ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್, ದೀದಿಯನ್ನು ಬಿಟ್ಟುಬಿಟ್ಟಿದ್ದಾರೆ. ಚುನಾವಣಾ ಫಲಿತಾಂಶ ಬರುವ ಮುನ್ನವೇ ಬೇರೆಡೆಗೆ ದೊಡ್ಡ ಸಲಹೆಗಾರನಾಗಿ ಸೇರಿಕೊಂಡಿದ್ದಾರೆ. ಈ ಸಂಗತಿಯೇ ಸಾಕಷ್ಟು ವಿಚಾರವನ್ನು ಹೇಳುತ್ತಿದೆ” ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಟೀಕಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪರ ಪ್ರಶಾಂತ್ ಕಿಶೋರ್, ಚುನಾವಣಾ ತಂತ್ರಗಾರನಾಗಿದ್ದಾರೆ. ಮಾರ್ಚ್ 27ರಂದು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಆರಂಭಗೊಳ್ಳಲಿದ್ದು, ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement