ಹಾಲಕ್ಕಿ ಸಮುದಾಯ ಭವನ ಲೋಕಾರ್ಪಣೆ

ಕುಮಟಾ : ತಾಲ್ಲೂಕಿನ ದೀವಗಿಯಲ್ಲಿ ಹಾಲಕ್ಕಿ ಒಕ್ಕಲಿಗರ ಸಂಘ ವತಿಯಿಂದ ಆಯೋಜಿಸಲಾಗಿದ್ದ ಹಾಲಕ್ಕಿ ಒಕ್ಕಲಿಗರ ಸಮುದಾಯ ಭವನದ ಲೋಕಾರ್ಪಣೆ ಮತ್ತು ಗುರುವಂದನಾ ಸಮಾರಂಭದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ , ಸಚಿವರಾದ ಶಿವರಾಮ್ ಹೆಬ್ಬಾರ್ ಗೋಪಾಲಯ್ಯ, ನಾರಾಯಣಗೌಡ, ಪದ್ಮಶ್ರೀ ಪುರಸ್ಕೃತರಾದ ತುಳಸಿ ಗೌಡ ಹಾಗೂ ಸುಕ್ರಿ ಬೊಮ್ಮ ಗೌಡ, ಶಾಸಕರಾದ ಸುನಿಲ್ ನಾಯ್ಕ, ದಿನಕರ್ ಶೆಟ್ಟಿ, ಮಸಾಲೆ ಜಯರಾಮ್,. ಮಾಜಿ ಶಾಸಕರಾದ ಮಂಕಾಳು ವೈದ್ಯ, ಸಂಘದ ಅಧ್ಯಕ್ಷರು ಇದ್ದರು.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement