ರಮೇಶ ಜಾರಕಿಹೊಳಿ ರಾಜೀನಾಮೆ: ಮೂವರು ಬೆಂಬಲಿಗರಿಂದ ಆತ್ಮಾಹುತಿಗೆ ಯತ್ನ

ಬೆಳಗಾವಿ: ರಾಸಲೀಲೆ ಸಿಡಿ ಹೊರಬಿದ್ದ ನಂತರ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ರಾಜೀನಾಮೆ ಅಂಗೀಕರಿಸಬಾರದು ಎಂದು ಆಗ್ರಹಿಸಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಆತ್ಮಾಹುತಿಗೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆ ಗೋಕಾಕದಲ್ಲಿ ನಡೆದಿದೆ. ಮೂವರು ಆತ್ಮಾಹುತಿಗೆ ಯತ್ನಿಸಿದ್ದು, ಪೊಲೀಸರು ತಡೆದಿದ್ದಾರೆ.
ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಷಯ ಗೊತ್ತಾಗುತ್ತಿದ್ದಂತೆ ಗೋಕಾಕ ಬಸವ ವೃತ್ತದಲ್ಲಿ ಜಮಾವಣೆಗೊಂಡ ಅವರ ಬೆಂಬಲಿಗರು ರಾಜೀನಾಮೆ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ. ಅಲ್ಲದೇ ಸರ್ಕಾರ ಯಾವುದೇ ಕಾರಣಕ್ಕೂ ಅವರ ರಾಜೀನಾಮೆ ಅಂಗೀಕರಿಸಬಾರದು ಎಂದು ಆಗ್ರಹಿಸಿ ಮೂವರು ಬೆಂಬಲಿಗರು ಮೈಮೇಲೆ ಡೀಸೆಲ್ ಸುರಿದುಕೊಂಡು ಬೆಂಕಿಹಚ್ಚಿಕೊಳ್ಳಲು ಮುಂದಾಗಿದ್ದಾರೆ. ತಕ್ಷಣವೇ ಅಲ್ಲಿದ್ದ ಪೊಲೀಸರು ಈ ಮೂವರನ್ನು ತಡೆದು ರಕ್ಷಣೆ ಮಾಡಿದ್ದಾರೆ.
.

3 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

ನಿಮ್ಮ ಕಾಮೆಂಟ್ ಬರೆಯಿರಿ

advertisement