ಹತ್ರಾಸ ಕೊಲೆ ಪ್ರಕರಣ: ಮುಖ್ಯ ಆರೋಪಿ ತಲೆಗೆ ೧ ಲಕ್ಷ ರೂ.ಘೋಷಣೆ

ಹತ್ರಾಸ್(ಉತ್ತರಪ್ರದೇಶ): ತಮ್ಮ ಪುತ್ರಿಗೆ ಕಿರುಕುಳ ನೀಡಿದ್ದರ ವಿರುದ್ಧ ದೂರು ನೀಡಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಕೊಲೆ ಮಾಡಿದ ಎರಡು ದಿನಗಳ ನಂತರ, ಪೊಲೀಸರು ಸಾಸ್ನಿ ಪ್ರದೇಶದ ನೊಜಲ್‌ಪುರ ಗ್ರಾಮದ ಪ್ರಮುಖ ಆರೋಪಿ ಗೌರವ್ ಸೊಂಗ್ರಾ ತಲೆಗೆ ಒಂದು ಲಕ್ಷ ರೂ ಬಹುಮಾನ ಘೋಷಿಸಲಾಗಿದೆ.
ಇತರ ಇಬ್ಬರು ಆರೋಪಿಗಗಳ ಸುಳಿವಿಗೆ ತಲಾ 25 ಸಾವಿರ ರೂ. ಬಹುಮಾನ ಘೋಷಿಸಲಾಗಿದ್ದು, ಈವರೆಗೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.
ಕಳೆದ ಸೋಮವಾರ ತನ್ನ ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತನನ್ನು ಹಗಲೇ ಗುಂಡಿಕ್ಕಿ ಸಾಯಿಸಲಾಗಿತ್ತು. ಗೌರವ್ ಸೊಂಗ್ರಾ ತನ್ನ ಮನೆಗೆ ನುಗ್ಗಿ ತನ್ನ ಪುತ್ರಿಯನ್ನು ಚುಡಾಯಿಸಿದ್ದಾನೆ ಎಂದು ರೈತ ಸುಮಾರು ಎರಡೂವರೆ ವರ್ಷಗಳ ಹಿಂದೆ ಪ್ರಕರಣ ದಾಖಲಿಸಿದ್ದ. ಆರೋಪಿ ಗೌರವ್ ರೈತನ ಕಿರಿಯ ಮಗಳನ್ನು ಮದುವೆಯಾಗಲು ಮತ್ತು ಪ್ರಕರಣ ಹಿಂಪಡೆಯಲು ಒತ್ತಾಯಿಸುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಗುಂಡೇಟಿಗೆ ಬಲಿಯಾದ ವ್ಯಕ್ತಿಯ ಪುತ್ರಿ ಆರು ಜನರ ವಿರುದ್ಧ ಲಿಖಿತ ದೂರು ನೀಡಿದ್ದು, ಇದರಲ್ಲಿ ನಾಲ್ವರನ್ನು ಗುರುತಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಒಬ್ಬನನ್ನು ಈಗಾಗಲೇ ಬಂಧಿಸಲಾಗಿದ್ದು, ಇತರ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ.ಆರೋಪಿಗಳ ವಿರುದ್ಧ ಎನ್‌ಎಸ್‌ಎ ಅಡಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.

ಪ್ರಮುಖ ಸುದ್ದಿ :-   ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ 50 ಲಕ್ಷ ರೂ. ದರೋಡೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement