ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಧಿಸಿ ಬ್ಯಾಂಕ್ ಒಕ್ಕೂಟಗಳು ಎರಡು ದಿನದ ಮುಷ್ಕರಕ್ಕೆ ಕರೆ ನೀಡಿವೆ.
ಹೀಗಾಗಿ ಸಾರ್ವಜನಿಕ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೆನರಾ ಬ್ಯಾಂಕ್ ಹೇಳಿದೆ. ರಾಷ್ಟ್ರೀಯ ಬ್ಯಾಂಕ್ ಒಕ್ಕೂಟ ಮಾರ್ಚ್ 15-16ರಂದು ಎರಡು ದಿನಗಳ ಕಾಲ ಮುಷ್ಕರಕ್ಕೆ ಕರೆ ನೀಡಿದ್ದು, ಈ ಸಂದರ್ಭದಲ್ಲಿ ಗ್ರಾಹಕರಿಗೆ ಬ್ಯಾಂಕ್ ಸೇವೆಗಳು ಲಭ್ಯ ಇರುವುದಿಲ್ಲ ಎಂದು ತಿಳಿಸಲಾಗಿದೆ. ಮುಷ್ಕರದ ದಿನಗಳಲ್ಲಿ ಬ್ಯಾಂಕ್ ಶಾಖೆಗಳಲ್ಲಿ ಕಾರ್ಯನಿರ್ವಹಣೆಯಲ್ಲಿ ಅಗತ್ಯ ಕ್ರಮ ಕೈಗೋಳಲಾಗುತ್ತಿದೆ. ಆದರೆ ಮುಷ್ಕರ ಕಾರ್ಯರೂಪಕ್ಕೆ ಬಂದಲ್ಲಿ ಅದು ಶಾಖೆಗಳು ಹಾಗೂ ಕಾರ್ಯನಿರ್ವಹಣೆ ಮೇಲೆ ಪರಿಣಾಮ ಬೀರಲಿದೆ ಎಂದು ಬ್ಯಾಂಕ್ ಹೇಳಿದೆ.
ನಿಮ್ಮ ಕಾಮೆಂಟ್ ಬರೆಯಿರಿ