ಮಾ.೧೫, ೧೬ರಂದು ಬ್ಯಾಂಕ್‌ ಮುಷ್ಕರ

ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಧಿಸಿ ಬ್ಯಾಂಕ್​ ಒಕ್ಕೂಟಗಳು ಎರಡು ದಿನದ ಮುಷ್ಕರಕ್ಕೆ ಕರೆ ನೀಡಿವೆ.
ಹೀಗಾಗಿ ಸಾರ್ವಜನಿಕ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೆನರಾ ಬ್ಯಾಂಕ್​ ಹೇಳಿದೆ. ರಾಷ್ಟ್ರೀಯ ಬ್ಯಾಂಕ್​ ಒಕ್ಕೂಟ ಮಾರ್ಚ್​ 15-16ರಂದು ಎರಡು ದಿನಗಳ ಕಾಲ ಮುಷ್ಕರಕ್ಕೆ ಕರೆ ನೀಡಿದ್ದು, ಈ ಸಂದರ್ಭದಲ್ಲಿ ಗ್ರಾಹಕರಿಗೆ ಬ್ಯಾಂಕ್​ ಸೇವೆಗಳು ಲಭ್ಯ ಇರುವುದಿಲ್ಲ ಎಂದು ತಿಳಿಸಲಾಗಿದೆ. ಮುಷ್ಕರದ ದಿನಗಳಲ್ಲಿ ಬ್ಯಾಂಕ್​ ಶಾಖೆಗಳಲ್ಲಿ ಕಾರ್ಯನಿರ್ವಹಣೆಯಲ್ಲಿ ಅಗತ್ಯ ಕ್ರಮ ಕೈಗೋಳಲಾಗುತ್ತಿದೆ. ಆದರೆ ಮುಷ್ಕರ ಕಾರ್ಯರೂಪಕ್ಕೆ ಬಂದಲ್ಲಿ ಅದು ಶಾಖೆಗಳು ಹಾಗೂ ಕಾರ್ಯನಿರ್ವಹಣೆ ಮೇಲೆ ಪರಿಣಾಮ ಬೀರಲಿದೆ ಎಂದು ಬ್ಯಾಂಕ್‌ ಹೇಳಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

ನಿಮ್ಮ ಕಾಮೆಂಟ್ ಬರೆಯಿರಿ

advertisement