ರಮೇಶ ಜಾರಕಿಹೊಳಿ ಸಿಡಿ ಪ್ರಕರಣ: ದಿಢೀರ್‌ ವಿಚಾರಣೆಗೆ ಹಾಜರಾದ ಕಲ್ಹಳ್ಳಿ

ಬೆಂಗಳೂರು : ರಮೇಶ್ ಜಾರಕಿಹೊಳಿಯವರದ್ದು ಎನ್ನಲಾದ ರಾಸಲೀಲೆ ಸಿಡಿ ಬಯಲು ಪ್ರಕರಣದಲ್ಲಿ ಸಿಡಿ ಬಿಡುಗಡೆ ಮಾಡಿದ್ದ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಹಳ್ಳಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.
ದಿನೇಶ ಕಲ್ಹಳ್ಳಿ ಅವರು ತಮಗೆ ಸೂಕ್ತ ಭದ್ರತೆ ನೀಡುವವರೆಗೂ ಪೊಲೀಸರ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಹೇಳಿದ್ದರು. ಇದೀಗ ದಿಢೀರ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಮಾರ್ಚ್ 9ರಂದು ವಿಚಾರಣೆಗೆ ಬರುವುದಾಗಿ ಹೇಳಿದ್ದ ದಿನೇಶ ಕಲ್ಹಳ್ಳಿ ಶುಕ್ರವಾರ (ಮಾ.೫) ವಿಚಾರಣೆಗೆ ಹಾಜರಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಈ ಸಂರ್ಭದಲ್ಲಿ ಮಾತನಾಡಿದ ಅವರು, ಪೊಲೀಸರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ.ನಾನು ತನಿಖೆಗೆ ಪೂರಕವಾಗುವ ಮಾಹಿತಿ ನೀಡಿದ್ದೇನೆ.ಜೊತೆಗೆ ದೂರಿನಲ್ಲಿರುವ ಸತ್ಯಾಸತ್ಯಾತೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆಯೂ ಹೇಳಿದ್ದೇನೆ ಎಂದರು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಜಾತ್ರಾ ಮಹೋತ್ಸವದ ವೇಳೆ ರಥದ ಚಕ್ರದಡಿ ಸಿಲುಕಿ ಇಬ್ಬರು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement