ಬೆಂಗಳೂರು : ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣ ಸಂಬಂಧ, ಸಿಡಿಯಲ್ಲಿನ ದೃಶ್ಯಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ರಮೇಶ್ ಜಾರಕಿಹೊಳಿ ನ್ಯಾಯಾಲಯದಿಂದ ತಡೆ ತಂದಿದ್ದಾರೆ.
ಸಿಡಿ ದೃಶ್ಯಾವಳಿಗಳನ್ನು ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತಡೆ ನೀಡಿದೆ.
ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ಸಿಡಿ ಬಿಡುಗಡೆಯಾದ ನಂತರದಲ್ಲಿ ರಮೇಶ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಿಡಿ ಬಿಡುಗಡೆಯಾಗಿ ನಾಲ್ಕು ದಿನ ಕಳೆದ ಬಳಿಕ ರಮೇಶ ಜಾರಕಿಹೊಳಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಮೊರೆ ಹೋಗಿದ್ದರು. ಇಂತಹ ಪ್ರಕರಣದ ವಿಚಾರಣೆ ನಡೆಸಿದಂ ನ್ಯಾಯಅಲಯವು ಸಿಡಿಯಲ್ಲಿನ ದೃಶ್ಯಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ತಡೆ ನೀಡಿದೆ.
ನಿಮ್ಮ ಕಾಮೆಂಟ್ ಬರೆಯಿರಿ