ಸಿಡಿ ಹಗರಣ: ಮಹಿಳಾ ಆಯೋಗದಿಂದ ಪ್ರಕರಣ ದಾಖಲು

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಕನ್ನಡ ರಕ್ಷಣಾ ವೇದಿಕೆ ಹಾಗೂ ವಕೀಲರು ನೀಡಿದ ಎರಡು ದೂರನ್ನು ಆಧರಿಸಿ, ರಾಜ್ಯ ಮಹಿಳಾ ಆಯೋಗವು ರಮೇಶ್ ಜಾರಕಿಹೊಳಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಂಡಿದೆ.
ಈ ಕುರಿತಂತೆ ಮಾಹಿತಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು, ಕನ್ನಡ ರಕ್ಷಣಾ ವೇದಿಕೆ ಹಾಗೂ ವಕೀಲರೊಬ್ಬರು ಸಂತ್ರಸ್ತೆಯನ್ನು ಕರೆದು ಹೇಳಿಕೆ ಪಡೆಯುವಂತೆ ದೂರು ನೀಡಿದ್ದಾರೆ. ಇದರಿಂದಾಗಿ ಸಂತ್ರಸ್ತೆಯನ್ನು ಕರೆದು ಹೇಳಿಕೆ ಪಡೆಯುತ್ತೇವೆ. ನಾವು ಪೊಲೀಸರಿಗೆ ಸಹಕರಿಸುತ್ತೇವೆ. ಸಂತ್ರಸ್ತೆ ಭಯಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   127 ವರ್ಷಗಳಷ್ಟು ಹಳೆಯ ಗೋದ್ರೇಜ್ ಗ್ರುಪ್‌ ಇಬ್ಭಾಗ

ನಿಮ್ಮ ಕಾಮೆಂಟ್ ಬರೆಯಿರಿ

advertisement