ಬೆಳಗಾವಿ: ರಾಸಲೀಲೆ ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದು, ಅವರ ಕ್ಷೇತ್ರವಾದ ಬೆಳಗಾವಿ ಜಿಲ್ಲೆಯ ಗೋಕಾಕಿನಲ್ಲಿ ಅವರ ಬೆಂಬಲಿಗರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ವೇಳೆ ಬೆಂಬಲಿಗನ ಮೈಗೆ ಬೆಂಕಿ ತಗುಲಿದ ಘಟನೆಯೂ ವರದಿಯಾಗಿದೆ.
ಗೋಕಾಕಿನಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ ಹೆಚ್ಚುತ್ತಿದ್ದು, ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುವ ಸಂರ್ಭದಲ್ಲಿ ಆವೇಸಕ್ಕೊಳಗಾದ ಅವರ ಬೆಂಬಲಿಗನೊಬ್ಬ ಬೆಂಕಿ ಹಚ್ಚಿದ ಟೈರ್ ಮೇಲೆ ಜಿಗಿದಿದ್ದರಿಂದ ಆತನಿಗೆ ಬೆಂಕಿ ತಗುಲಿತ್ತು. ತಕ್ಷಣ ಪೊಲೀಸರು ಆತನನ್ನು ರಕ್ಷಿಸಿದ್ದಾರೆ. ಆದರೆ ಆತನ ತೊಡೆಯ ಭಾಗಕ್ಕೆ ಬೆಂಕಿ ತಗುಲಿದ್ದು, ಕಾಲಿನ ಭಾಗ ಸುಟ್ಟಿದೆ. ತಕ್ಷಣ ಆತನನ್ನು ಗೋಕಾಕ್ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು ಹಾಗೂ ಅವರು ರಮೇಶ್ ನಿರ್ದೋಷಿಯಾದ ಬಳಿಕ ಮತ್ತೆ ಸಚಿವ ಸ್ಥಾನ ನೀಡಬೇಕು ಎಂದು ಬೆಂಬಲಿಗರು ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ