ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾಸಿಂಗ್‌ ಆಸ್ಪತ್ರೆಗೆ ದಾಖಲು

ಭೋಪಾಲ್​: ಕೆಲ ತಿಂಗಳ ಹಿಂದೆ ರೆಟಿನಾ ಹಿಂಭಾಗದಲ್ಲಿ ಸೋಂಕು ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದ ಭೋಪಾಲದ ಬಿಜೆಪಿ ಸಂಸದೆ ಸಾಧ್ವಿ ಈಗ ಉಸಿರಾಟದ ತೊಂದರೆಯಿಂದ ಪ್ರಜ್ಞಾ ಸಿಂಗ್ ಠಾಕೂರ್ ಪುನಃ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಆರೋಗ್ಯದಲ್ಲಿ ತೀವ್ರವಾಗಿ ಏರುಪೇರಾದ ಕಾರಣ ಅವರನ್ನು ತಕ್ಷಣವೆ ವಿಮಾನದ ಮೂಲಕ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಭಾಗಿಯಾಗಿದ್ದ ಸಂಸದೆಗೆ ಉಸಿರಾಟದ ಸಮಸ್ಯೆಯಾಗಿದೆ. ಖುರ್ಚಿಯಿಂದ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅಲ್ಲಿದ್ದವರು ಅವರನ್ನು ವಿಮಾನದ ಮೂಲಕ ಒಯ್ದು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪ್ರಜ್ಞಾ ಸಿಂಗ್ ಅವರು ಕೆಲ ತಿಂಗಳುಗಳಿಂದ ಏಮ್ಸ್​ ಆಸ್ಪತ್ರೆಯಲ್ಲಿ ರೆಟಿನಾ ಸಂಬಂಧಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ ಉಸಿರಾಟದ ಸಮಸ್ಯೆ ಉಂಟಾಗಿದ್ದು, ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಅವರ ಕಚೇರಿ ಮಾಹಿತಿ ನೀಡಿದೆ.

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement