ರಾಸಲೀಲೆ ಸಿಡಿ ಹಿಂದೆ ಕನಕಪುರದ ಷಡ್ಯಂತ್ರ: ಸಚಿವ ಯೋಗೇಶ್ವರ ಹೊಸ ಬಾಂಬ್‌..

ಬೆಂಗಳೂರು: ತಮ್ಮ ಹೇಳಿಕೆಗಳಿಂದಾಗಿ ಸದಾ ಸುದ್ದಿಯಲ್ಲಿರುವ ಸಚಿವ ಯೋಗೇಶ್ವರ ಈಗ ಮತ್ತೊಂದು ರಾಜಕೀಯ ಬಾಂಬ್‌ ಸಿಡಿಸಿದ್ದಾರೆ.
ಮಾಜಿ ಸಚಿವರ ವಿರುದ್ಧದ ರಾಸಲೀಲೆ ವಿಡಿಯೋ ಹಿಂದೆ ಕನಕಪುರದ ಷಡ್ಯಂತ್ರವಿದೆ ಎಂದು ಅವರು ಹೊಸ ರಾಜಕೀಯ ಬಾಂಬ್ ಸ್ಫೋಟ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಯೋಗೇಶ್ವರ, ಈ ಸಿಡಿ ಪ್ರಕರಣಕ್ಕೂ ಕನಕಪುರಕ್ಕೂ ನಂಟಿದೆ. ಈ ಸಿಡಿ ಹೊರಬರಲು ಕನಕಪುರ, ಬೆಳಗಾವಿಯವರೇ ಕಾರಣ ಎಂದು ಆರೋಪಿಸಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರದಲ್ಲಿ ಕನಕಪುರ ಮತ್ತು ಬೆಳಗಾವಿಯವರ ರಾಜಕೀಯ ಷಡ್ಯಂತ್ರ ಅಡಗಿದೆ. ಮುಂದಿನ ದಿನಗಳಲ್ಲಿ ಅವರು ಇದಕ್ಕೆ ತಕ್ಕ ಶಾಸ್ತಿ ಅನುಭವಿಸುತ್ತಾರೆ ಎಂದು ಹೇಳಿದರು.
ಆರು‌ ಸಚಿವರು ಯಾಕೆ ಕೋರ್ಟ್ ಗೆ ಹೋಗಿದ್ದಾರೋ ನನಗೆ ಗೊತ್ತಿಲ್ಲ.ಈ ಬಗ್ಗೆ ಆ ಸಚಿವರನ್ನೇ ಕೇಳಬೇಕು. ಇದು ಅವರ ವೈಯಕ್ತಿಕ ನಿರ್ಧಾರ. ಅವರ ವೈಯಕ್ತಿಕ ರಕ್ಷಣೆಗೆ ಕೋರ್ಟ್ ಮೊರೆ ಹೊಗಿರಬಹುದು ಎಂದು ಹೇಳಿದ ಅವರು, ಮೈತ್ರಿ ಸರ್ಕಾರ ಬೀಳಿಸಿದ ಕಾರಣ ಕೆಲವರು ಷಡ್ಯಂತ್ರ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣದಲ್ಲಿ ದೊಡ್ಡ ರಾಜಕೀಯ ಷಡ್ಯಂತ್ರವಿದೆ. ಈ ವಿಚಾರದಲ್ಲಿ ನನ್ನನ್ನು ಎಳೆಯಬೇಡಿ ಎಂದು ಮಾಧ್ಯಮದವರಿಗೆ ಯೋಗೇಶ್ವರ ಹೇಳಿದರು.

ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement