ಶ್ರೀಧರನ್‌ ಕೇರಳದ ಬಿಜೆಪಿ ಸಿಎಂ ಅಭ್ಯರ್ಥಿ: ಸುಬ್ರಮಣಿಯನ್‌ಸ್ವಾಮಿ ಅಪಶ್ರುತಿ

ತಿರುವನಂತಪುರಂ: ಮುಂದಿನ ತಿಂಗಳು ಕೇರಳ ವಿಧಾನಸಭೆಗೆ ಚುನಾವಣೆಗೆ ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮೆಟ್ರೊ ಮ್ಯಾನ್ ಇ ಶ್ರೀಧರನ್ ಅವರನ್ನು ಘೋಷಿಸಿದ ಬೆನ್ನಲ್ಲೇ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಇದಕ್ಕೆ ಅಪಶ್ರುತಿ ಎತ್ತಿದ್ದಾರೆ.
ಶ್ರೀಧರನ್ ಅವರು ಕೇರಳ ಬಿಜೆಪಿ ಸಿಎಂ ಅಭ್ಯರ್ಥಿ ಆಗುವುದಕ್ಕೆ ಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಅವರು ಶ್ರೀಧರನ್‌ ವಯಸ್ಸಿನ ಬಗ್ಗೆ ಟ್ವೀಟ್‌ ಮಾಡಿದ್ದು 89 ವರ್ಷದ ಶ್ರೀಧರನ್ ಅವರನ್ನುಕೇರಳದ ಮುಖ್ಯಮಂತ್ರಿ ಎಂದು ಹೇಳಿರುವ ಬಿಜೆಪಿ ತನ್ನ ೭೫ ವರ್ಷದ ಮಿತಿಯನ್ನು ಸಡಿಲಿಸಿದೆಯೇ ಎಂದು ಕೇಳಿದ್ದಾರೆ.
75 ವರ್ಷ ಮೀರಿದ ಬಿಜೆಪಿ ನಾಯಕರನ್ನು ಮಾರ್ಗದರ್ಶನ ಮಂಡಳಿಯ ಹೆಸರಿನಲ್ಲಿ ನಿವೃತ್ತಿಯ ಅಂಚಿಗೆ ತಳ್ಳುವ ತನ್ನ ನಿರ್ಧಾರವನ್ನು ಬಿಜೆಪಿ ಬದಲಿಸಿದೆಯಾ ಎಂದು ಕೇಳಿರುವ ಸ್ವಾಮಿ, ಬದಲಾಯಿಸಿದ್ದರೆಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಡಾ. ಮುರಳಿ ಮನೋಹರ್ ಜೋಶಿ ಅವರಂತಹವರಿಗೂ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಬೇಕು’ ಎಂದು ಟ್ವೀಟ್ ಮಾಡಿದ್ದಾರೆ.
88ರ ವಯೋಮಾನದ ಶ್ರೀಧರನ್ ಅವರು ಮೂಲತಃ ಕೇರಳದ ಪಾಲಕ್ಕಾಡ್ ಜಿಲ್ಲೆಯವರು. ಕೊಂಕಣ ರೈಲ್ವೆ, ದೆಹಲಿ ಮೆಟ್ರೋ ಮೊದಲಾದ ನಗರಗಳ ಮೆಟ್ರೋ ಯೋಜನೆ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.

ಪ್ರಮುಖ ಸುದ್ದಿ :-   ಮಣಿಪುರ : ಮತಗಟ್ಟೆ ಮೇಲೆ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement