೧೬ ಶಾಸಕರೂ ಕೋರ್ಟ್‌ ಮೆಟ್ಟಿಲೇರಲಿದ್ದಾರೆ: ಸಚಿವ ಸೋಮಶೇಖರ

ಬೆಂಗಳೂರು: ನಾವು ಆರು‌ ಜನ ಸಚಿವರು ಕೋರ್ಟ್‌ಗೆ ಅರ್ಜಿ ಹಾಕಿದ್ದೇವೆ. ಉಳಿದ ಸಚಿವರು ಕೂಡಾ ಕೋರ್ಟ್‌ಗೆ ಅರ್ಜಿ ಹಾಕುತ್ತಾರೆ. ಶನಿವಾರ ಅಥವಾ ಸೋಮವಾರ ಎಲ್ಲಾ 16 ಶಾಸಕರೂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ಸಹಕಾರ ಸಚಿವ ಎಸ್ .ಟಿ ಸೋಮಶೇಖರ್ ಹೇಳಿದ್ದಾರೆ.
ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನಾವು ಮೈತ್ರಿ ಸರ್ಕಾರ‌ ಕೆಡವಿ ಬಿಜೆಪಿ ಸರ್ಕಾರ ತಂದಿದ್ದೇವೆ ಎಂಬ ಸಿಟ್ಟಿದೆ. ಹೀಗಾಗಿ ನಮ್ಮ ವಿರುದ್ಧ ತೇಜೋವಧೆ ಯತ್ನ ನಡೆಯುತ್ತಿದೆ’ ಎಂದು ಆರೋಪಿಸಿದರು.
ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣ ಸಿಬಿಐ ತನಿಖೆಗೆ ವಹಿಸಬೇಕು. ನಾನು ಗೃಹಮಂತ್ರಿ ಜೊತೆ ಸಹ ಮಾತನಾಡಿದ್ದೇನೆ. ಈ ಪ್ರಕರಣ ಸಿಬಿಐಗೆ ವಹಿಸಬೇಕು’ ಎಂದು ಆಗ್ರಹಿಸಿದರು.
ನಾವು ಇಷ್ಟು ವರ್ಷ ರಾಜಕಾರಣದ ಮಾಡಿಕೊಂಡು ಬಂದಿದ್ದೇವೆ. ಆದರೆ ಕ್ಷಣ ಮಾತ್ರದಲ್ಲಿ ಟಿವಿಯಲ್ಲಿ ಏನೋ ಸುದ್ದಿ ಬಿತ್ತರಗೊಂಡರೆ ಹೇಗೆ?. ಹೀಗಾಗಿ ನಮ್ಮ ತೇಜೋವಧೆ ಆಗಬಾರದು ಎಂಬ ಕಾರಣಕ್ಕೆ ನಾವುಗಳು ಕೋರ್ಟ್ ಗೆ ಹೋಗಿದ್ದೇವೆ ಎಂದು ಸ್ಪಷ್ಟಪಡಿಸಿದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement