ರಾಜ್ಯ ಬಜೆಟ್‌: ಎಪಿಎಂಸಿ ಮಾರುಕಟ್ಟೆ ಕಾರ್ಯಕ್ಷಮತೆ ಹೆಚ್ಚಳಕ್ಕೆ 198 ಕೋಟಿ

ಬೆಂಗಳೂರು: ರಾಜ್ಯದಲ್ಲಿ 5500 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯಕ್ಷಮತೆ ಹೆಚ್ಚಿಸಲು 198 ಕೋಟಿ ವೆಚ್ಚದಲ್ಲಿ ಗಣಕೀಕರಣಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.
ಡಿಸಿಸಿ ಬ್ಯಾಂಕ್‍ನಲ್ಲಿ ಸರ್ಕಾರದ ಸಹಭಾಗಿತ್ವ ಪ್ರೋತ್ಸಾಹಿಸಲು ಷೇರು ಬಂಡವಾಳ ಹೆಚ್ಚಿಸುವ ಉದ್ದೇಶದಿಂದ 21 ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ಗಳಿಗೆ 10 ಲಕ್ಷ ರೂ.ಗಳ ಗರಿಷ್ಠ ಮಿತಿಗೊಳಪಟ್ಟು ಶೇ.25ರಷ್ಟು ಷೇರು ಬಂಡವಾಳ ನೀಡಲಾಗುವುದು ಎಂದರು.
ರೈತರು ಉತ್ಪಾದಿಸಿದ ಕೃಷಿ ಉತ್ಪನ್ನಗಳನ್ನು ಉಗ್ರಾಣ ನಿಗಮ, ಪ್ರಾಥಮಿಕ ಕೃಷಿ ಪತ್ತಿನ ಸಂಘಗಳು, ಟಿಎಪಿಸಿಎಂಎಸ್ ಹಾಗೂ ಇತರೆ ಸಹಕಾರ ಸಂಸ್ಥೆಗಳ ಗೋದಾಮುಗಳಲ್ಲಿ ಸಂಗ್ರಹಿಸಿಡಲು ರೈತರು ಪಾವತಿಸುವ ಸಂಗ್ರಹಣಾ ಶುಲ್ಕದಲ್ಲಿ ಶೇ.25ರಷ್ಟು ಸಹಾಯ ಧನವನ್ನು ಸರ್ಕಾರದಿಂದ ಒದಗಿಸಲಾಗುವುದು.
ಈ ಉದ್ದೇಶಕ್ಕಾಗಿ 25 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಪ್ರಾಥಮಿಕ ಕೃಷಿಪತ್ತಿನ ಸಂಘಗಳು. ಟಿಎಪಿಸಿಎಂಎಸ್ ರೈತರು ಬೆಳೆದ ಕೃಷಿ ಉತ್ಪನ್ನಗಳನ್ನು ಗೋದಾಮುಗಳಲ್ಲಿ ಶೇಖರಣೆ ಮಾಡಿ ಮಾರುಕಟ್ಟೆ ಬೆಲೆ ಶೇ.60ರಷ್ಟು ಅಡಮಾನ ಸಾಲವನ್ನು ಶೇ.11ರ ಬಡ್ಡಿದರದಲ್ಲಿ ವಿತರಿಸುತ್ತಿವೆ.ಈ ಸಾಲಗಳ ಮೇಲೆ ಗರಿಷ್ಠ ಆರು ತಿಂಗಳಿಗೆ ಶೇ.4ರ ಬಡ್ಡಿ ಸಹಾಯಧನ ರಾಜ್ಯ ಸರ್ಕಾರ ನೀಡಲು 5 ಕೋಟಿ ರೂ. ಅನುದಾನವನ್ನು ನೀಡಲಾಗಿದೆ.

ಪ್ರಮುಖ ಸುದ್ದಿ :-   ಅಥಣಿ | ಶಾಲೆಯಲ್ಲಿ ಆಟವಾಡುವಾಗಲೇ ಹೃದಯಾಘಾತ ; ವಿದ್ಯಾರ್ಥಿನಿ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement