ಬೆಂಗಳೂರು : ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಎಲ್ಲ ವ್ಯವಹಾರಗಳ ಗಣಕೀಕರಣಕ್ಕೆ ಕ್ರಮ, ಜಲ ಜೀವನ್ ಮಿಷನ್ ಯೋಜನೆಯೊಂದಿಗೆ ಒಗ್ಗೂಡಿಸಿ ರೂಪಿಸಿರುವ ಮನೆ ಮನೆಗೆ ಗಂಗೆ ಯೋಜನೆಯಡಿ 2021-22 ಸಾಲಿನಲ್ಲಿ 4,316 ಕೋಟಿ ರೂ. ವೆಚ್ಚದಲ್ಲಿ 22 ಲಕ್ಷ ಗ್ರಾಮೀಣ ಕುಟುಂಬಗಳಿಗೆ ಕಾರ್ಯಾತ್ಮಕ ಸಂಪರ್ಕ ಒದಗಿಸಲು ಕ್ರಮ ಹಾಗೂ ಹಳ್ಳಿಗಳಿಗೆ ಬಲ್ಕ್ ನೀರು ಸರಬರಾಜು ಮಾಡಲು 25.740 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ ಎಂದರು.
ಗ್ರಾಮ ಪಂಚಾಯಿತಿಗಳಲ್ಲಿ ಸುಧಾರಿತ ಸಂಯೋಜಿತ ಪಂಚತಂತ್ರ 2.0 ಬಳಕೆ ಹಾಗೂ ಮೊಬೈಲ್ ಅಪ್ಲಿಕೇಷನ್ ಅಭಿವೃದ್ಧಿ ಪಡಿಸಲು ಕ್ರಮ. ಪ್ರತಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸಂಜೀವಿನಿ ಯೋಜನೆಯ ಮಹಿಳಾ ಸ್ವಸಹಾಯ ಸಂಘಗಳಿಂದ ರಚಿತವಾದ ಒಕ್ಕೂಟದ ಮೂಲಕ ಸಮಗ್ರ ಮತ್ತು ವೈಜ್ಞಾನಿಕ ಘನತ್ಯಾಜ್ಯ ನಿರ್ವಹಣೆಗೆ ಕ್ರಮ ಕೈಗೊಳ್ಳುವುದು ಎಂದು ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ