ಹುಲಿ ದಾಳಿಗೆ ಬಾಲಕ ಸಾವು, ಅಜ್ಜನಿಗೆ ಗಂಭೀರ ಗಾಯ

ಮಡಿಕೇರಿ: ಕಾಡುಗಳು ನಶವಾಗುತ್ತಿರುವಂತೆಯೇ ಕಾಡುಪ್ರಾಣಿಗಳಿಗೂ ಮಾನವರಿಗೂ ಸಂಘರ್ಷ ಮುಂದುವರಿದೆ. ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿಗೆ ಬಾಲಕನೊಬ್ಬ ಸಾವಿಗೀಡಾಗಿದ್ದು ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪೊನ್ನಂಪೇಟೆ ತಾಲ್ಲೂಕಿನ ಬೆಳ್ಳೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಏಕಾಏಕೀ ದಾಳಿ ನಡಸಿದ ಹುಲಿಯು ಎಂಟು ವರ್ಷದ ಬಾಲಕ ರಂಗಸ್ವಾಮಿ ಕೊಂದು ಹಾಕಿದೆ ಮತ್ತು ಜೊತೆಯಲ್ಲಿದ್ದ ಆತನ ಅಜ್ಜ ಕೆಂಚ‌ (52) ಎಂಬಾತನನ್ನು ಗಂಭೀರವಾಗಿ ಗಾಯಗೊಳಿಸಿದೆ.
ಗಾಯಾಳು ಕೆಂಚನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಜಿಲ್ಲೆಯಲ್ಲಿ ಹುಲಿ ಕಾಟ ಮಿತಿ ಮೀರುತ್ತಿದ್ದು, ಕಳೆದ ಒಂದು ತಿಂಗಳಲ್ಲಿ ಹುಲಿ ದಾಳಿಗೆ ಮೂವರು ವ್ಯಕ್ತಿಗಳು ಮೃತಪಟ್ಟಿದ್ದು, ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ನಿಮ್ಮ ಕಾಮೆಂಟ್ ಬರೆಯಿರಿ

advertisement