ಮಾನನಷ್ಟ ಮೊಕದ್ದಮೆ: ಜಾಮೀನು ರಹಿತ ವಾರಂಟ್‌ ವಿರುದ್ಧ ಕಂಗನಾ ಮೇಲ್ಮನವಿ

ಮುಂಬೈ: ಚಿತ್ರ ಸಾಹಿತಿ ಜಾವೇದ್ ಅಖ್ತರ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೊರಡಿಸಿದ್ದ ಜಾಮೀನು ಸಹಿತ ವಾರಂಟ್ ಪ್ರಶ್ನಿಸಿ ನಟಿ ಕಂಗನಾ ರನೌತ್ ಸೆಷನ್ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್‌ ಟಿ.ವಿಗೆ ನೀಡಿದ ಸಂದರ್ಶನದಲ್ಲಿ ಕಂಗನಾ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಚಿತ್ರ ಸಾಹಿತಿ ಜಾವೇದ್ ಅಖ್ತರ್ ಆರೋಪಿಸಿ ಕಳೆದ ನವೆಂಬರ್ನಲ್ಲಿ ದೂರು ದಾಖಲಿಸಿದ್ದರು. ಮುಂಬೈ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ವಿಚಾರಣೆಗೆ ಕಂಗನಾ ಹಾಜರಾಗದ ಹಿನ್ನೆಲೆಯಲ್ಲಿ ಮಾರ್ಚ್ 1ರಂದು ಜಾಮೀನು ಸಹಿತ ವಾರೆಂಟ್ ಹೊರಡಿಸಿತ್ತು.
ಸೋಮವಾರವೂ ನ್ಯಾಯಾಲಯಕ್ಕೆ ಗೈರಾದ ಹಿನ್ನೆಲೆಯಲ್ಲಿ ಜಾಮೀನು ಸಹಿತ ವಾರೆಂಟ್‌ ಹೊರಡಿಸಿ ವಿಚಾರಣೆಯನ್ನು ಮಾರ್ಚ್ 26ಕ್ಕೆ ಮುಂದೂಡಲಾಗಿತ್ತು.ಈ ವಾರಂಟ್ ಪ್ರಶ್ನಿಸಿ ಬುಧವಾರ ಸೆಷನ್ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement