ಶಾಸಕ ಸಂಗಮೇಶಗೆ ನಿರೀಕ್ಷಣಾ ಜಾಮೀನು

ಶಿವಮೊಗ್ಗ:ಭದ್ರಾವತಿ ಗಲಾಟೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ನ್ಯಾಯಾಲಯದಿಂದ ರಿಲೀಫ್‌ ಸಿಕ್ಕಿದೆ.
ಫೆ.27 ಮತ್ತು 28 ರಂದು ಭದ್ರಾವತಿಯ ಕನಕ ಮಂಟಪದಲ್ಲಿ ಕಬಡ್ಡಿ ಪಂದ್ಯಾವಳಿ ಅಂತಿಮ ಪಂದ್ಯದ ಬಳಿಕ ನಡೆದ ಗಲಭೆ ಪ್ರಕರಣದಲ್ಲಿ ಶಾಸಕ ಸಂಗಮೇಶ್ವರ್ ಪುತ್ರ ಗಣೇಶ್ ಹಾಗೂ ಸಹೋದರ ಬಿ.ಕೆ ಮೋಹನ್ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿತ್ತು.ಹೀಗಾಗಿ ಬಂಧನ ಭೀತಿ ಎದುರಾಗಿತ್ತು. ಈಗ ಈ ಮೂವರಿಗೆ ಶಿವಮೊಗ್ಗ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ. ಈ ಮೂವರೂ ಕಳೆದ ವಾರವೇ ನಿರೀಕ್ಷಣಾ ಜಾಮೀನು ಕೋರಿ ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.ಬುಧವಾರ ನಿರೀಕ್ಷಣಾ ಜಾಮೀನು ದೊರೆತಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಎಸ್‌ಐಟಿ ನೋಟಿಸ್​: ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ಪ್ರಜ್ವಲ್‌ ; ಪತ್ರದಲ್ಲೇನಿದೆ..?

ನಿಮ್ಮ ಕಾಮೆಂಟ್ ಬರೆಯಿರಿ

advertisement