ಕರ್ನಾಟಕ: ೮೦೦ ದಾಟಿದ ಪ್ರತಿದಿನದ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಏರುಮುಖವಾಗಿದೆ. ಕಳೆದ ೨೪ ತಾಸಿನಲ್ಲಿ (ಶುಕ್ರವಾರ) ಹೊಸ ಪ್ರಕರಣಗಳ ಸಂಖ್ಯೆ 800ರ ಗಡಿ ದಾಟಿದ್ದು ಅನೇಕ ದಿನಗಳ ನಂತರ ದಿನನಿತ್ಯದ ಪ್ರಕರಣ ೮೦೦ ದಾಟಿದೆ.
ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಕೊರೋನಾ ಸೋಂಕಿಗೆ ಐದು ಜನರು ಮೃತಪಟ್ಟಿದ್ದು, ಬೆಂಗಳೂರು ನಗರದಲ್ಲಿ ಇಬ್ಬರು, ಧಾರವಾಡ, ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ರಾಜ್ಯದ ಆರೋಗ್ಯ ಇಲಾಖೆಯ ಬುಲೆಟಿನ್ ನಲ್ಲಿ ಮಾಹಿತಿ ನೀಡಲಾಗಿದೆ.
೫೪೬ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು ೮೧೧೪ ಸಕ್ರಿಯ ಸೋಂಕು ಪ್ರಕರಣಗಳಿವೆ.ರಾಜ್ಯದಲ್ಲಿ ೧೨೫ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಕಳೆದ ೨೪ ಗಂಟೆಯಲ್ಲಿ ೫೨೬ ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement