ಕೃಷಿ ಕಾಯ್ದೆ ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ರೈತ ಅಭಿಯಾನ

ನವ ದೆಹಲಿ: ಕೃಷಿ ಕಾಯ್ದೆಗಳ ವಿರುದ್ಧ ರಾಷ್ಟ್ರ ರಾಜಧಾನಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಚುನಾವಣೆ ನಡೆಯುತ್ತಿರುವ ಪಶ್ಚಿಮ ಬಂಗಾಳದಲ್ಲೂ ಅಭಿಯಾನ ನಡೆಸಲು ಮುಂದಾಗಿದ್ದಾರೆ.

ಕೃಷಿ ಕಾಯ್ದೆಗಳ ಪರ ಮಾತನಾಡುವವರನ್ನು ಸೋಲಿಸಿ ಎಂದು ಕರೆ ನೀಡಲು ಪಶ್ಚಿಮ ಬಂಗಾಳದಲ್ಲಿ ಅಭಿಯಾನ ನಡೆಸಲಿದ್ದಾರೆ.ಸಂಯುಕ್ತ ಕಿಸಾನ್ ಮೋರ್ಚಾ ವೇಳಾಪಟ್ಟಿ ಬಿಡುಗಡೆ ಮಾಡಿದೆ. ರೈತ ನಾಯಕರಾದ ರಾಕೇಶ್ ಟಿಕಾಯತ್, ದರ್ಶನ್ ಪಾಲ್, ಬಲ್ಬೀರ್ ಸಿಂಗ್ ರಾಜೆವಾಲ್, ಗುರ್ನಾಮ್ ಸಿಂಗ್ ಚಾದುನಿ ಹಾಗೂ ಯೋಗೇಂದ್ರ ಯಾದವ್ ಅಭಿಯಾನದಲ್ಲಿ ಭಾಗಿಯಾಗಲಿದ್ದಾರೆ.
ಕೊಲ್ಕತ್ತಾ, ನಂದಿಗ್ರಾಮ ಮತ್ತು ಸಿಂಗುರ್‌ನಲ್ಲಿ ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಾ.೧೨ರಿಂದ(ಶುಕ್ರವಾರ) ಮೂರು ದಿನಗಳ ಕಾಲ ನಡೆಯಲಿದೆ. ತಮಿಳುನಾಡಿನಲ್ಲಿಯೂ ಅಭಿಯಾನ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೇಂದ್ರದ ಮೂರು ಹೊಸ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ನವೆಂಬರ್ 26ರಿಂದ ದೆಹಲಿ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement