ಸಿಡಿ ಪ್ರಕರಣ; ಪೊಲೀಸರಿಗೆ‌ ದೂರು ನೀಡಿದ ರಮೇಶ ಜಾರಕಿಹೊಳಿ

ಬೆಂಗಳೂರು: ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪೊಲೀಸರಿಗೆ ದೂರು ನೀಡಿದ್ದಾರೆ.

ಬೆಂಗಳೂರಿನ ಸದಾಶಿವ ನಗರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಸದಾಶಿವ ನಗರದ ಪೊಲೀಸ್ ಠಾಣೆಯಲ್ಲಿ ರಮೇಶ್ ಜಾರಕಿಹೊಳಿ ಅವರ ಆಪ್ತರಾದ ನೆಲಮಂಗಲದ ಮಾಜಿ ಶಾಸಕ  ಎಂ.ವಿ ನಾಗರಾಜ್ ಅವರ ಮೂಲಕ ದೂರು ದಾಖಲಿಸಿದ್ದು  ಸ್ವತಃ ರಮೇಶ್ ಜಾರಕಿಹೊಳೆಯವರೇ ಲಿಖಿತ ರೂಪದಲ್ಲಿ ಈ ದೂರನ್ನು  ನಾಗಾರಾಜ ಮೂಲಕ ಠಾಣೆಗೆ ರವಾನಿಸಿದ್ದಾರೆ.

ರಮೇಶ್ ಅವರು ನೀಡಿರುವ ದೂರಿನಲ್ಲಿ ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರುವ  ನನ್ನ ತೇಜೋವಧೆಗೆ ಕೆಲವರು ಸಂಚು ರೂಪಿಸಿ ಕೆಲವರು ಅಶ್ಲೀಲ ಸಿಡಿ ಬಿಡುಗಡೆ ಮಾಡಿದ್ದಾರೆ. ಈ ಸಿಡಿಗಳು ನಕಲಿಯಾಗಿದ್ದು,   ನನಗೆ ಬ್ಲ್ಯಾಕ್ ಮೇಲ್ ಮಾಡಲಾಗಿದೆ, ಈ ಬಗ್ಗೆ ತನಿಖೆ ನಡೆಸಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ. ಆದರೆ ದೂರಿನಲ್ಲಿ ಯಾರ ಹೆಸರನ್ನೂ ಉಲ್ಲೇಖಿಸಿಲ್ಲ ಎನ್ನಲಾಗಿದೆ. ದೂರು ಪಡೆದುಕೊಂಡಿರುವ ಸದಾಶಿವ ನಗರ ಠಾಣೆ ಪೊಲೀಸರು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ಇದನ್ನು ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ(ಎಸ್‌ಐಟಿ) ಹಸ್ತಾಂತರಿಸುವ ಸಾಧ್ಯತೆಯಿದೆ.

ಪ್ರಮುಖ ಸುದ್ದಿ :-   ಕುಮಟಾ : ಕಣ್ಣುಗಳನ್ನು ದಾನ ಮಾಡಿ ಸಾವಿನ ನಂತರವೂ ಸಾರ್ಥಕ್ಯದ ಕಾರ್ಯ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement