ಎಫ್ಐಆರ್ ದಾಖಲಾಗುತ್ತಿದ್ದಂತೆ ಯುವತಿ ಹೇಳಿಕೆ ವಿಡಿಯೋ ಬಿಡುಗಡೆ..!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರ   ಸಿಡಿ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ.

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೋಳಿ ಅವರ ಸಿಡಿ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಬೆಂಗಳೂರಿನ ಸದಾಶಿವ ನಗರದಲ್ಲಿ ರಮೇಶ ಜಾರಕಿಹೊಳಿ ಪ್ರಕರಣ ದಾಖಲಿಸುತ್ತಿದ್ದಂತೆ ವಿಡಿಯೋದಲ್ಲಿರುವವಳು ಎನ್ನಲಾದ  ಯುವತಿ ಮೊದಲ ಬಾರಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ಅವರೇ ಸಿಡಿ ಬಿಡುಗಡೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಸಿಡಿ ಬಿಡುಗಡೆಯಾದ 12 ದಿನಗಳ ನಂತರ ಪ್ರತ್ಯಕ್ಷವಾಗಿರುವ ಯುವತಿ, ರಮೇಶ್ ಜಾರಕಿಹೊಳಿ   ನನಗೆ ಕೆಲಸಕೊಡಿಸುವುದಾಗಿ ಹೇಳಿ ನಂಬಿಸಿ ಮೋಸ ಮಾಡಿದ್ದಾರೆ.  ಈ ವಿಡಿಯೋದಿಂದಾಗಿ ನನ್ನ ಮಾನ ಹರಾಜಾಗಿದೆ. ನನಗೆ ಯಾವುದೇ ರಾಜಕೀಯ ನಾಯಕರ ಬೆಂಬಲ ಇಲ್ಲ ಎಂದು ಹೇಳಿಕೊಂಡಿದ್ದಾರೆ.ಈ ವಿಡಿಯೋ ಹೇಗೆ ಮಾಡಿದರು ಎಂಬುದು ನನಗೆ ಗೊತ್ತಿಲ್ಲ.  ಇದರಿಂದ ನನ್ನ ತಂದೆ, ತಾಯಿ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾನೂ ಕೂಡ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೆ ತಮ್ಮ ಕುಟುಂಬಕ್ಕೆ ರಕ್ಷಣೆ ಕೊಡಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಯುವತಿ ಮನವಿ ಮಾಡಿದ್ದಾರೆ.

ಪ್ರಮುಖ ಸುದ್ದಿ :-   ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

ಅಜ್ಞಾತ ಸ್ಥಳದಿಂದ ಯುವತಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ  ವಿರುದ್ಧವೇ   ಆರೋಪಗಳನ್ನು ಮಾಡಿದ್ದಾರೆ.

ಯುವತಿ ವಿಡಿಯೋ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ ಅವರು, ಆ ಯುವತಿ ಸಂಚುಕೋರರ ಕೈಗೊಂಬೆಯಾಗಿದ್ದಾಳೆ. ಇದು ಸಹ ಷಡ್ಯಂತ್ರದ ಒಂದು ಭಾಗ ಎಂದು ಪುನರುಚ್ಚರಿಸಿದ್ದಾರೆ.

ಸಿಡ  ಪ್ರಕರಣದಲ್ಲಿ ತಮಗೆ ಬ್ಯ್ಯಾಕ್ ಮೇಲ್ ಮಾಡಲಾಗಿದೆ ಎಂದು ಆರೋಪಿಸಿ ರಮೇಶ್ ಜಾರಕಿಹೊಳಿ  ಶನಿವಾರ (ಮಾ.೧೩) ಸದಾಶಿವನಗರ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಿಸಿದ್ದಾರೆ.ಕಾನೂನು ತಜ್ಞರು, ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಸುದೀರ್ಘ ಚರ್ಚೆ ನಡೆಸಿದ ನಂತರ ರಮೇಶ್ ಜಾರಕಿಹೊಳಿ   ದೂರು ನೀಡಿರುವುದಾಗಿ ಹೇಳಿದ್ದಾರೆ. ರಮೇಶ್ ಜಾರಕಿಹೋಳಿ ತಮ್ಮ ಆಪ್ತ ಎಂ ವಿ ನಾಗರಾಜ್ ಮೂಲಕ ಸದಾಶಿವ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

5 / 5. 5

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement