ಸಿಡಿ ಪ್ರಕರಣದಲ್ಲಿ ಗಟ್ಟಿ ಸಾಕ್ಷ್ಯ ಸಂಗ್ರಹ ಮಾಡಿಕೊಂಡೇ ಮೂವರು ಕಿಂಗ್‌ ಪಿನ್‌ ವಿರುದ್ಧ ದೂರು: ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ : ರಮೇಶ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಪಕ್ಕಾ ಸಾಕ್ಷ್ಯ ಸಂಗ್ರಹ ಮಾಡಿದ ನಂತರ ಈ ಪ್ರಕರಣದ ಮೂವರು ಕಿಂಗ್‌ ಪಿನ್‌ಗಳ ಬಗ್ಗೆ ದೂರು ನೀಡಲಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಎಸ್‌ಐಟಿ ತನಿಖೆ ಬಗ್ಗೆ ಶನಿವಾರ ಪ್ರತಿಕ್ರಿಯೆ ನೀಡಿರುವ ಅವರು, ನಾವು ಗಾಳಿಯಲ್ಲಿ ಗುಂಡು ಹೊಡೆಯುತ್ತಿಲ್ಲ. ಕಾನೂನು ಹೋರಾಟದಿಂದಲೂ ಹಿಂದೆ ಸರಿಯವುದಿಲ್ಲ. ಸಿಡಿ ಪ್ರಕರಣದ ಬಗ್ಗೆ ದೂರು ನೀಡುವ ಕುರಿತು ರಮೇಶ ಜಾರಕಿಹೊಳಿ ರಮೇಶ ಜಾರಕಿಹೊಳಿ ಅವರೊಂದಿಗೆ ಚರ್ಚಿಸಲಾಗಿದೆ. ಈ ಪ್ರಕಣರಣದಲ್ಲಿ ಪಕ್ಕಾ ಸಾಕ್ಷ್ಯ ಸಂಗ್ರಹ ಮಾಡಿಕೊಂಡು ಮೂವರ ವಿರುದ್ಧ ದೂರು ನೀಡಲಾಗುವುದು. ಆದಷ್ಟು ಬೇಗ ದೂರು ನೀಡಲಾಗುವುದು ಎಂದು ಅವರು ಹೇಳಿದರು.
ಕಾನೂನು ಹೋರಾಟ ಮುಂದುವರಿಯುತ್ತದೆ, ಸಾಕ್ಷ್ಯಾಧಾರಗಳನ್ನು ಖಾಸಗಿಯಾಗಿ ಸಂಗ್ರಹ ಮಾಡುವ ಕಾರ್ಯ ನಡೆಸಲಾಗುತ್ತಿದೆ. ಗಾಳಿಯಲ್ಲಿ ಗುಂಡು ಹೊಡೆಯುವ ಪ್ರಶ್ನೆಯೇ ಇಲ್ಲ. ಎಲ್ಲ ಪಕ್ಕಾ ಮಾಡಿಕೊಂಡೇ ದೂರು ನೀಡುತ್ತೇವೆ ಎಂದು ತಿಳಿಸಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement