ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡರನ್ನು ಮತ್ತೆ ಜೆಡಿಎಸ್ಗೆ ಕರೆತರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಶಾಸಕ ಜಿ.ಟಿ. ದೇವೇಗೌಡರು ನಮ್ಮಿಂದ ದೂರ ಹೋಗಿದ್ದಾರೆ. ಜೆಡಿಎಸ್ ಶಾಸಕ ಸಾರಾ ಮಹೇಶ್ ಕಾರಣಕ್ಕೆ ದೂರವಾಗುತ್ತಿದ್ದೇನೆ ಎಂದು ಹೇಳಿದ್ದರು. ಜಿ.ಟಿ. ದೇವೇಗೌಡರಿಗೆ ಮಹೇಶ್ ಅವರು ಅಂತಹದ್ದೇನು ಮಾಡಿದ್ದಾರೋ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.
ನನ್ನ ರಾಜಕೀಯ ಜೀವನದಲ್ಲಿ ಬಹಳ ಅನುಭವವಾಗಿದೆ. ಹೀಗಾಗಿ ಜಿ.ಟಿ.ದೇವೇಗೌಡರು ಜೆಡಿಎಸ್ಸಿಗೆ ಮತ್ತೆ ಬರುತ್ತೇನೆ ಎಂದರೂ ನಾವು ಅವರನ್ನು ಸ್ವಾಗತಿಸುವುದಿಲ್ಲ. ಅವರ ಬಗ್ಗೆ ಎಚ್.ಡಿ. ದೇವೇಗೌಡರಿಗೆ ಸಾಫ್ಟ್ ಕಾರ್ನರ್ ಇತ್ತು. ಅವರ ಬಗ್ಗೆ ಕೆಲವರು ದೇವೇಗೌಡರಿಗೆ ಹೇಳಿದ್ದರು. ಆದರೆ ನಾವು ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ