ಮಮತಾಗೆ ಗಾಯ: ದಾಳಿ ವರದಿ ತಳ್ಳಿಹಾಕಿದ ಚುನಾವಣಾ ಆಯೋಗ

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ದಾಳಿ ನಡೆದಿದೆ ಎಂಬ ವರದಿಯನ್ನು ಭಾರತದ ಚುನಾವಣಾ ಆಯೋಗವು ತಳ್ಳಿಹಾಕಿದೆ.
ಆಯೋಗ ನೇಮಕ ಮಾಡಿದ್ದ ಪಶ್ಚಿಮ ಬಂಗಾಳದ ಚುನಾವಣಾ ವೀಕ್ಷಕರು ಮತ್ತು ಮುಖ್ಯ ಕಾರ್ಯದರ್ಶಿಯ ವರದಿ ಆಧರಿಸಿ ಚುನಾವಣಾ ಆಯೋಗ ಈ ನಿರ್ಧಾರಕ್ಕೆ ಬಂದಿದೆ.
ಬುಧವಾರ ಸಂಜೆ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಪ್ರಚಾರ ನಡೆಸುತ್ತಿದ್ದಾಗ ಅಪರಿಚಿತರಿಂದ ತಳ್ಳಲ್ಪಟ್ಟ ಮಮತಾ ಬ್ಯಾನರ್ಜಿ ಕೆಳಗೆ ಬಿದ್ದು ಎಡಗಾಲಿಗೆ ಮತ್ತು ಸೊಂಟಕ್ಕೆ ಗಾಯಗಳಾಗಿವೆ ಎಂಬ ವರದಿಗಳು ಬಂದಿದ್ದವು. ಬಳಿಕ ಟಿಎಂಸಿ ವರಿಷ್ಠೆ, ಕೊಲ್ಕತ್ತಾದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಾಗಿದ್ದರು. ಘಟನೆ ಬಳಿಕ, ಚುನಾವಣಾ ಆಯೋಗವು ಮುಖ್ಯ ಕಾರ್ಯದರ್ಶಿ ಅಲಾಪನ್ ಬಂಡೋಪಾಧ್ಯಾಯ, ವಿಶೇಷ ವೀಕ್ಷಕ ಅಜಯ್ ನಾಯಕ್ ಮತ್ತು ವಿಶೇಷ ಪೊಲೀಸ್ ವೀಕ್ಷಕ ವಿವೇಕ್ ದುಬೆ ಅವರಿಂದ ಶುಕ್ರವಾರ ಸಂಜೆ ವರದಿ ಪಡೆದಿತ್ತು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement