ಹಲ್ಲೆ ಪ್ರಕರಣ: ಡೆಲಿವರಿ ಬಾಯ್ ಎಫ್‌ಐಆರ್ ದಾಖಲಿಸುತ್ತಿದ್ದಂತೆಯೇ ಮಹಿಳೆ ನಾಪತ್ತೆ

ಬೆಂಗಳೂರು: ಜೊಮ್ಯಾಟೋ ಡೆಲಿವರಿ ಬಾಯ್ ಕಾಮರಾಜ್ ಎಫ್‌ಐಆರ್ ದಾಖಲಿಸುತ್ತಿದ್ದಂತೆಯೇ ಆರೋಪ ಮಾಡಿದ್ದ ಮಹಿಳೆ ಬೆಂಗಳೂರಿನಲ್ಲಿ ಇಲ್ಲ.
ಆಹಾರ ಡೆಲಿವರಿ ವಿಳಂಬ ಪ್ರಶ್ನಿಸಿದ್ದ ಯುವತಿ ಹಿತೇಶಾ ಚಂದ್ರಾನಿ ಮೇಲೆ ಜೊಮ್ಯಾಟೋ ಡೆಲಿವರಿ ಬಾಯ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮರಾಜ್ ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದರು. ದೂರು ಹಿನ್ನೆಲೆಯಲ್ಲಿ ಪೊಲೀಸರು ಮಹಿಳೆಯನ್ನು ಸಂಪರ್ಕರಿಸಲು ಯತ್ನಿಸಿದ್ದು, ಈ ವೇಳೆ ಮಹಿಳೆ ಬೆಂಗಳೂರಿನಿಂದ ಇಲ್ಲ ಎಂಬುದು ಗೊತ್ತಾಗಿದೆ.
ನಗರಕ್ಕೆ ಬಂದ ಕೂಡಲೇ ಹೇಳಿಕೆ ನೀಡುವಂತೆ ಮಹಿಳೆಗೆ ಸೂಚನೆ ನೀಡಲಾಗಿದೆ. ಪ್ರಕರಣ ಸಂಬಂಧ ತನಿಖೆ ಮುಂದುವರೆಯಲಿದೆ. ಮಹಿಳೆ ಹೇಳಿಕೆ ನೀಡಲು ಬರದೇ ಹೋದರೆ, ಆಕೆಯನ್ನು ಬಂಧನಕ್ಕೊಳಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಪೊಲೀಸರು ಮಾರ್ಚ್ 9 ರಂದು ನಡೆದ ಘಟನೆ ಸಂಬಂಧ ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದಾರೆ.ಈ ನಡುವೆ ಡೆಲಿವರಿ ಬಾಯ್ ಕಾಮರಾಜ್ ಹೇಳಿಕೆ ನೀಡಿ, ಚಪ್ಪಲಿ ತೆಗೆದು ಒಗೆದಿದ್ದಾರೆ. ಕೋಪ ಬಂದು ನಾನು ಕೈಯೆತ್ತಿದ್ದೆ ಆದರೆ, ಹೊಡೆದಿಲ್ಲ. ಅವರು ಚಪ್ಪಲಿಯಲ್ಲಿ ನನಗೆ ಹೊಡೆಯುವಾಗ ಆಕೆಯ ಉಂಗುರ ಆಕೆಯ ಮೂಗಿಗೆ ತಗುಲಿತ್ತು. ಆದರೆ, ಮಹಿಳೆ ನಾನೇ ಹೊಡೆದೆ ಎಂದು ದೊಡ್ಡ ಸುದ್ದಿ ಮಾಡಿದ್ದಾರೆ ಎಂದು ಹೇಳಿದ್ದಾರೆ.
ದೊಡ್ಡತಗೂರು ಪ್ರದೇಶದ 31 ವರ್ಷದ ಯುವತಿ ಹಿತೇಶಾ ಚಂದ್ರಾನೀ ಜೊಮ್ಯಾಟೋ ಡೆಲಿವರಿ ಬಾಯ್ ತಮ್ಮ ಮೂಗಿಗೆ ಪಂಚ್ ಮಾಡಿದ್ದ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದರು. ಅದಾದ ಮರುದಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಆತನನ್ನು ಬಂಧಿಸಿದ್ದರು. ವ್ಯಕ್ತವಾಗುತ್ತಿವೆ.

ಪ್ರಮುಖ ಸುದ್ದಿ :-   ಏಪ್ರಿಲ್‌ 18, 19ರಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement