ಬಿಜೆಪಿ ಟಿಕೇಟ್‌ ನೀಡಿದ್ದಾದರೆ ಗೆಲುವಿನ ಸಿಕ್ಸರ್‌ ಸಿಡಿಸುವುದು ಖಚಿತ: ಮುತಾಲಿಕ್‌ ವಿಶ್ವಾಸ

ಬೆಳಗಾವಿ: ಹಿಂದುತ್ವಕ್ಕಾಗಿ ಕಳೆದ ೪೦ ವರ್ಷಗಳಿಂದ ನಾನು ಮಾಡಿದ ಸೇವೆಯನ್ನು ಪರಿಗಣಿಸಿ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿ ಟಿಕೆಟ್‌ ನೀಡಬೇಕೆಂದು ಶ್ರೀರಾಮಸೇನಾ ಅಧ್ಯಕ್ಷ ಪ್ರಮೋದ ಮುತಾಲಿಕ್‌ ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.

ಬಿಜೆಪಿ ಟಿಕೆಟ್‌ ನೀಡಿದರೆ ಗೆಲುವು ಖಚಿತ ಎಂದು ಮುತಾಲಿಕ ವಿಶ್ವಾಸ ವ್ಯಕ್ತಪಡಿಸಿದ್ದಾರೆ. .
ಸುರೇಶ ಅಂಗಡಿಯವರ ಅಕಾಲಿಕ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಈಗ ಚುನಾವಣೆ ನಿಗದಿಯಾಗಿದೆ. ಈಗ ಸಂಸದ ಸ್ಥಾನದ ಗದ್ದುಗೆ ಏರಬೇಕು ಅಂತ ಬೆಳಗಾವಿ ಜಿಲ್ಲೆಯ ಹಲವು ನಾಯಕರು ಪ್ರಯತ್ನ ನಡೆಸುತ್ತಿದ್ದಾರೆ.‌ ಕುತೂಹಲ ಕೆರಳಿಸಿರುವ ಬೆಳಗಾವಿ ಲೋಕಸಭೆ ಚುನಾವಣೆಗೆ ದಿನಾಂಕ ನಿಗದಿಯಾದರೂ ಇನ್ನು ಎರಡೂ ರಾಷ್ಟ್ರೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿಲ್ಲ.
ಇನ್ನು ಶ್ರೀರಾಮ ಸೇನೆಯ ಕಾರ್ಯಕರ್ತರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರಮೋದ್‌ ಮುತಾಲಿಕ್ ಪರ ಫೇಸ್‌ಬುಕ್‌ ಮತ್ತು ವಾಟ್ಸಪ್ ಸೇರಿದಂತೆ ಸೋಷಿಯಲ್ ಮೀಡಿಯಾಗಳಲ್ಲಿ ಅಭಿಯಾನ ಪ್ರಾರಂಭ ಮಾಡಿದ್ದಾರೆ. ಪ್ರಮೋದ್ ಮುತಾಲಿಕ ಅವರಿಗೆ ಟಿಕೇಟ್ ನೀಡಿ ಎಂದು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಒತ್ತಡ ಹಾಕುತ್ತಿದ್ದಾರೆ.
ಹಿಂದುತ್ವಕ್ಕಾಗಿ ಜೀವನ ಮುಡಿಪಾಗಿಟ್ಟ ಮುತಾಲಿಕ್‌ ಅವಿಗೆ ಟಿಕೆಟ್ ನೀಡಬೇಕು ಎಂದು ಅವರ ಬೆಂಬಲಿರು ಮನವಿ ಮಾಡಿದ್ದಾರೆ..

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement