ಹೃದಯಾಘಾತ: ಬಿಜೆಪಿ ಹಿರಿಯ ನಾಯಕ ವಾಲ್ಮೀಕಿ ನಾಯಕ ನಿಧನ

ಕಲಬುರಗಿ: ಬಿಜೆಪಿಯ ಹಿರಿಯ ಧುರೀಣ ಹಾಗೂ ಮಾಜಿ ಶಾಸಕ ವಾಲ್ಮೀಕ ನಾಯಕ (೭೦) ಶುಕ್ರವಾರ (ಮಾ.೧೯) ಹೃದಯಾಪಘಾತದಿಂದ ನಿಧನರಾಗಿದ್ದಾರೆ.
ಇಲ್ಲಿನ ಜಯದೇವ ಆಸ್ಪತ್ರೆಯಲ್ಲಿ ತೀವ್ರ ಎದೆ ನೋವಿನಿಂದಾಗಿ ದಾಖಲಾಗಿದ್ದು, ಬೆಳಿಗ್ಗೆ 9 ಗಂಟೆಗೆ ನಿಧನರಾಗಿದ್ದಾರೆ.
ನಾಯಕ ಅವರು ಕಳೆದ ಬಾರಿ ಚಿತ್ತಾಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಈ ಮೊದಲು ಅವರಿಗೆ ಹೃದಯ ಶಸ್ತ್ರಚಿಕಿತ್ಸೆಯಾಗಿದ್ದು, ಶುಕ್ರವಾರ ಬೆಳಿಗ್ಗೆ ವಾಡಿಯಲ್ಲಿ ಬೆಳಿಗ್ಗೆ 7 ಗಂಟೆಗೆ ವಾಕಿಂಗ್ ಮಾಡುವಾಗ ಇದಕ್ಕಿದಂತೆ ಎದೆನೋವು ಕಾಣಿಸಿಕೊಂಡಾಗ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಯಿತು.
ವಾಲ್ಮೀಕಿ ನಾಯಕ ಅವರು ಪತ್ನಿ, ಇಬ್ಬರು ಗಂಡು ಮತ್ತು ನಾಲ್ವರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆಯು ಶನಿವಾರ (ಮಾ.೨೦) ಮಧ್ಯಾಹ್ನ 1 ಗಂಟೆಗೆ ವಾಡಿಯ ಅವರ ಹೊಲದಲ್ಲಿ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ವಾಲ್ಮೀಕ ನಾಯಕ ನಿಧನಕ್ಕೆ ಮಾಜಿ ನಗರಸಭೆ ಸದಸ್ಯ ಕಿಶನ ಜಾಧವ ಅವರು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement