ಬಿಜೆಪಿ ಕೋರ್‌ ಕಮಿಟಿ ಸಭೆ: ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆ ಚರ್ಚೆ

ಬೆಂಗಳೂರು: ಮೂರೂ ಕ್ಷೇತ್ರಗಳ ಉಪಚುನಾವಣೆ ಗೆಲ್ಲಲೇಬೇಕೆಂದು ಬಿಜೆಪಿ ರಣತಂತ್ರ ರೂಪಿಸುತ್ತಿದೆ.
ಪಕ್ಷದ ಕಚೇರಿಯಲ್ಲಿ ಶನಿವಾರ ರಾಜ್ಯ ಉಸ್ತುವಾರಿ ಅರುಣ್‍ಸಿಂಗ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಸಹ ಉಸ್ತುವಾರಿ ಡಾ.ಅರುಣಾ, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಪ್ರಹ್ಲಾದ್ ಜೋಷಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ಮತ್ತಿತರರ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಿತು.
ಸಭೆಯಲ್ಲಿ ಬೆಳಗಅವಿ ಲೋಕಸಭಾ ಕ್ಷೇತ್ರ ಹಾಗೂ ಮಸ್ಕಿ ಮತ್ತು ಬಸವ ಕಲ್ಯಾಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಲಾಯಿತು ಪಕ್ಷದ ಸಂಘಟನೆ ಬಗ್ಗೆಯೂ ಚರ್ಚೆ ನಡೆಯಿತು. ಮುಖ್ಯವಾಗಿ ಸ ಮೂರು ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸುದೀರ್ಘವಾದ ಚರ್ಚೆ ನಡೆದಿದ್ದು, ಮತ್ತೊಮ್ಮೆ ಸ್ಥಳೀಯ ಮುಖಂಡರ ಜತೆ ಚರ್ಚೆ ನಡೆಸಿ ಹೆಸರನ್ನು ಅಂತಿಮಗೊಳಿಸುವ ಹೊಣೆಗಾರಿಕೆಯನ್ನು ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟಿಲ್‍ಗೆ ಅವರಿಗೆ ನೀಡಲಾಯಿತು.
ಸೋಮವಾರದೊಳಗೆ ಮೂರೂ ಕ್ಷೇತ್ರಗಳ ಜಿಲ್ಲಾ ಮತ್ತು ತಾಲ್ಲೂಕು ಮುಖಂಡರ ಜತೆ ಸಭೆ ನಡೆಸಿ ನಂತರ ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿಕೊಡಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಾಯಚೂರು ಜಿಲ್ಲೆ, ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ಪ್ರತಾಪ್‍ಗೌಡ ಪಾಟೀಲ್‍ಗೆ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ. ಬಸವ ಕಲ್ಯಾಣ ಮತ್ತು ಬೆಳಗಾವಿ ಕ್ಷೇತ್ರಗಳಿಂದ ಪೈಪೋಟಿ ಹೆಚ್ಚಾಗಿರುವ ಕಾರಣ ಅಲ್ಲಿನ ಎಲ್ಲ ಮುಖಂಡರ ಜತೆ ಚರ್ಚಿಸಿದ ನಂತರವೇ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸಲು ಪಕ್ಷ ಮುಂದಾಗಿದೆ.
ಬಸವ ಕಲ್ಯಾಣದಲ್ಲಿ ಮಾಜಿ ಸಚಿವ ದಿ. ನಾಗಮಾರಪಲ್ಲಿ ಪುತ್ರ ಸೂರ್ಯವಂಶಿ ನಾಗಮಾರಪಲ್ಲಿ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಸೇರಿದಂತೆ ಹಲವಾರು ಆಕಾಂಕ್ಷಿಗಳಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ದಿ.ಸುರೇಶ್ ಅಂಗಡಿ ಪತ್ನಿ, ಪುತ್ರಿ ಶ್ರದ್ಧಾ ಶೆಟ್ಟರ್, ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಮಾಜಿ ಶಾಸಕ ಸಂಜಯ್ ಪಾಟೀಲ್ ಸೇರಿದಂತೆ ಮತ್ತಿತರ ಹೆಸರುಗಳು ಕೇಳಿಬಂದಿವೆ.

ಪ್ರಮುಖ ಸುದ್ದಿ :-   ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ: 625ಕ್ಕೆ 625 ಅಂಕ ಪಡೆದ ಅಂಕಿತಾ ರಾಜ್ಯಕ್ಕೆ ಟಾಪರ್, ಉಡುಪಿ ಜಿಲ್ಲೆಗೆ ಮೊದಲ ಸ್ಥಾನ

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement