ಶತಾಬ್ದಿ ಎಕ್ಸ್ ಪ್ರೆಸ್ ನಲ್ಲಿ ಬೆಂಕಿ ಅವಘಡ, ಜೀವಹಾನಿಯಾಗಿಲ್ಲ: ಸ್ಪಷ್ಟನೆ

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್ ರೈಲು ನಿಲ್ದಾಣದಲ್ಲಿ ಶನಿವಾರ ಶತಾಬ್ದಿ ಎಕ್ಸ್ ಪ್ರೆಸ್ ಜನರೇಟರ್ ಮತ್ತು ಲಗೇಜ್‌ ಬೋಗಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಳಗ್ಗೆ 6-45ರ ಸುಮಾರಿನಲ್ಲಿ ಘಟನೆ ಸಂಭವಿಸಿದ್ದು, ನವದೆಹಲಿ- ಲಖನೌ ಶತಾಬ್ದಿ ಎಕ್ಸ್ ಪ್ರೆಸ್ ಬೆಳಗ್ಗೆ 6-41ರ ಹೊತ್ತಿಗೆ ಗಾಜಿಯಾಬಾದ್ ನಿಲ್ದಾಣಕ್ಕೆ ಬಂದಾಗ ಜನರೇಟರ್ ಮತ್ತು ಲಗ್ಗೇಜ್ ಬೋಗಿಯಲ್ಲಿ ಹೊಗೆ ಕಾಣಿಸಿಕೊಂಡಿದೆ. ನಂತರ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ನಡೆಸಿ ಹೊಗೆ ನಿಯಂತ್ರಿಸಿದ್ದಾರೆ.
ಬೆಂಕಿ ಹೊತ್ತಿಕೊಂಡ ಬೋಗಿ ಬೇರ್ಪಡಿಸಿದ ನಂತರ 8-20ರ ಸುಮಾರಿಗೆ ರೈಲು ತನ್ನ ಗಮ್ಯಸ್ಥಾನಕ್ಕೆ ಪ್ರಯಾಣ ಬೆಳೆಸಿತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ಬೆಂಕಿ ಅವಘಡದಿಂದ ಜೀವ ಹಾನಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ 2024: ಮೊದಲ ಹಂತದ ಮತದಾನಕ್ಕೆ ಮುನ್ನವೇ 2019ರ ಚುನಾವಣೆಗಿಂತ ಹೆಚ್ಚು ಮೌಲ್ಯದ ಸ್ವತ್ತು ವಶಕ್ಕೆ ಪಡೆದ ಚುನಾವಣಾ ಆಯೋಗ; ಎಷ್ಟು ಗೊತ್ತಾ..?

ನಿಮ್ಮ ಕಾಮೆಂಟ್ ಬರೆಯಿರಿ

advertisement