ಗ್ರಾಮ ವಾಸ್ತವ್ಯದಿಂದ ಜನಸಾಮಾನ್ಯರು- ಅಧಿಕಾರಿಗಳ ನಡುವಿನ ಕಂದಕ ದೂರ

ಹುಬ್ಬಳ್ಳಿ; ಜನಪ್ರತಿನಿಧಿಗಳು, ಅಧಿಕಾರಿಗಳು ಮೇಲಿನಿಂದ ಧರೆಗೆ ಇಳಿದು ಬಂದವರಲ್ಲ. ಜನರು ಮಂತ್ರಿಗಳು,ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಆಯುಕ್ತರ ಬಳಿ ತಮ್ಮ ಅಹವಾಲು ಹೇಳಿಕೊಳ್ಳಲು ಮುಜುಗರ ಪಟ್ಟುಕೊಳ್ಳುತ್ತಾರೆ. ಜನಸಾಮಾನ್ಯರ ನಡುವಿನ ಕಂದಕ ಮುಚ್ಚಿ, ಸೇತುವೆ ನಿರ್ಮಿಸುವಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಛಭ್ಬಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದ ಸಚಿವರು ಮುಂಜಾನೆ ಎದ್ದು ದಿನ ಪತ್ರಿಕೆಗಳನ್ನು ಓದಿ, ನಂತರ ಗ್ರಾಮದ ಕೆರೆ ಏರಿ ಮೇಲೆ ವಾಯು ವಿಹಾರ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಜನರಿಗೆ ಅಧಿಕಾರಿಗಳು ನಮ್ಮವರು ಎನಿಸಿಬೇಕು, ಹಾಗೆಯೇ ಅಧಿಕಾರಿಗಳಿಗೆ ಜನರು ನಮ್ಮವರು ಎನಿಸಬೇಕು. ಪಟ್ಟಣ ಪ್ರದೇಶದ ಅಭಿವೃದ್ಧಿಯಿಂದ ಮಾತ್ರ ದೇಶ ಉದ್ಧಾರವಾಗುವುದಿಲ್ಲ ಎಂದರು.

ಕೋಟ್‌
ಕೊರೋನಾ ನಡುವೆ ಬದುಕುಬೇಕು
ಜರ್ಮನಿಯಲ್ಲಿ ಕೋವಿಡ್ ಮೂರನೇ ಅಲೆ ಕಾಣಿಸಿಕೊಂಡಿದೆ. ಸಾಂಕ್ರಾಮಿಕ ರೋಗ ಎಷ್ಟುದಿ‌ನ ಇರುತ್ತದೆ ಎಂದು ತಿಳಿಯದು. ಇದರೊಟ್ಟಿಗೆ ಬದುಕುವುದನ್ನು ಕಲಿಯಬೇಕಾಗಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಮಾಸ್ಕ್ ಧರಿಸಬೇಕು. ಸರ್ಕಾರದ ಮುಂದೆ ಲಾಕ್ ಡೌನ್ ಪ್ರಸ್ತಾವ ಇಲ್ಲ. ಮುಂದಿನ ಹತ್ತುದಿನ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು.
-.ಆರ್‌.ಅಶೋಕ, ಕಂದಾಯ ಸಚಿವರು.

ಪ್ರಮುಖ ಸುದ್ದಿ :-   ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

ಗಾಂಧೀಜಿಯವರ ಆಶಯದಂತೆ ಹಳ್ಳಿಗಳು ಉದ್ಧಾರವಾಗಬೇಕು. ಸರ್ಕಾರ ಹಳ್ಳಿಗಳ ಉದ್ಧಾರಕ್ಕೆ ನೂರು ಕಾರ್ಯಕ್ರಮ ಜಾರಿ ಮಾಡಿದರೂ ಜನರಿಗೆ ಹತ್ತು ಕಾರ್ಯಕ್ರಮಗಳ ಬಗ್ಗೆ ಅರಿವು ಇರುವುದಿಲ್ಲ. ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಲು ಹಾಗೂ ಅವುಗಳನ್ನು ಅನುಷ್ಠಾನಗೊಳಿಸಲು ಗ್ರಾಮ ವಾಸ್ತವ್ಯ ನೆರವಾಗುವುದು ಎಂದರು.
ರಾಜ್ಯದ 270 ಕಡೆ ಗ್ರಾಮ ವಾಸ್ತವ್ಯ ನಡೆಯುತ್ತದೆ. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ತಹಶೀಲ್ದಾರರು ತಮ್ಮ ಹಂತದಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಮೂರನೇ ಶನಿವಾರದಂದು‌ ಕಂದಾಯ ಇಲಾಖೆ ಕಚೇರಿಗಳು ಖಾಲಿಯಿರುತ್ತವೆ. ಕ್ಲರ್ಕ್ ಗಳು ಮಾತ್ರ ಇರುತ್ತಾರೆ. ಇದರೊಂದಿಗೆ ಪರಿವರ್ತನೆ ಆರಂಭವಾಗಿದೆ. ಕಾರ್ಯಕ್ರಮ ಜನರನ್ನು ತಲುಪುತ್ತದೆ. ಇದರಲ್ಲಿ ವಿರೋಧ ಪಕ್ಷದ ಶಾಸಕರು ಪಾಲ್ಗೊಳ್ಳಬೇಕು ಎಂದರು.

ಕೋಟ್‌
ಗ್ರಾಮಸ್ಥರು ತೋರಿದ ಪ್ರೀತಿಗೆ ಚಿರ ಋಣಿ

ಗ್ರಾಮ ವಾಸ್ತವ್ಯಕ್ಕೆ ಆಗಮಿಸಿದ ನನ್ನನ್ನು ಭವ್ಯ ಮೆರವಣಿಗೆಯೊಂದಿಗೆ ಛಬ್ಬಿ ಗ್ರಾಮಸ್ಥರು ಬರ ಮಾಡಿಕೊಂಡರು. ಊರಲ್ಲಿ ಹಬ್ಬದ ವಾತಾವರಣ, ಪ್ರತಿ ಮನೆಯ ಮುಂದೆ ರಂಗವಲ್ಲಿ ಹಾಕಿದ್ದಾರೆ. ರಾತ್ರಿ ಹನ್ನೊಂದು ಗಂಟೆ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಈದರ ಮಧ್ಯೆಯೇ ಜನರು ಅಹವಾಲು ಸಲ್ಲಿಸಿದರು. ಉತ್ತರ ಕರ್ನಾಟಕ ಭಾಗದಲ್ಲಿ ಸ್ವಲ್ಪವೇ ಕೆಲಸ ಮಾಡಿದರೂ ಜನರು ಹೆಚ್ಚಿನ ಪ್ರೀತಿ -ಆದರಗಳನ್ನು‌ ತೋರುತ್ತಾರೆ. ಗ್ರಾಮಸ್ಥರು ತೋರಿದ ಪ್ರೀತಿಗೆ ಚಿರ ಋಣಿ ಆಗಿದ್ದೇನೆ.
–.ಆರ್‌.ಅಶೋಕ, ಕಂದಾಯ ಸಚಿವರು.

ಪ್ರಮುಖ ಸುದ್ದಿ :-   ಬೆಂಗಳೂರಿನ ಹಲವೆಡೆ ಜೋರಾಗಿ ಮಳೆ

ಶೇಖವ್ವ ಕಾಳೆ ಮನೆಯಲ್ಲಿ ಉಪಹಾರ ಸೇವನೆ:
ಛಬ್ಬಿ ಗ್ರಾಮದ ಶೇಖವ್ವ ಕಾಳೆಯವರ ಮನೆಯಲ್ಲಿ ಬೆಳಗಿನ ಉಪಹಾರವನ್ನು ಕುಟುಂಬದ ಸದಸ್ಯರೊಂದಿಗೆ ಸಚಿವರು ಸೇವನೆ ಮಾಡಿದರು. ನಂತರ ಶೇಖವ್ವ ಕಾಳೆ ಆಶಿರ್ವಾದ ಪಡೆದು ಸಚಿವರು ಗ್ರಾಮದಿಂದ ನಿರ್ಗಮಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ವಿಪತ್ತು ನಿರ್ವಹಣಾ ಆಯುಕ್ತ ಮನೋಜ್ ರಂಜನ್, ಉಪವಿಭಾಗಾಧಿಕಾರಿ ಗೋಪಾಲಕೃಷ್ಣ, ಹುಬ್ಬಳ್ಳಿ ನಗರದ ತಹಶೀಲ್ದಾರ ಶಶಿಧರ ಮಾಡ್ಯಾಳ, ಹುಬ್ಬಳ್ಳಿ ಗ್ರಾಮದ ತಹಶೀಲ್ದಾರ ಪ್ರಕಾಶ ನಾಶಿ, ಉಪಸ್ಥಿತರಿದ್ದರು.

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement