ತಮ್ಮ ಪುತ್ರ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಬಿಎಸ್‌ವೈ

ರಾಯಚೂರು: ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತಿತ್ತು. ಆದರೆ, ಇಂತಹ ಹೇಳಿಕೆಗಳನ್ನು ತಳ್ಳಿಹಾಕಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಚುನಾವಣೆಯಲ್ಲಿ ತಮ್ಮ ಪುತ್ರ ಸ್ಪರ್ಧೆ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಉಳಿದುಕೊಳ್ಳುವಂತೆ ಒತ್ತಾಯ ಇರುವುದರಿಂದ, ವಿಜಯೇಂದ್ರ ಅಲ್ಲಿ ಮನೆ ಮಾಡಿಕೊಳ್ಳಲಿದ್ದಾರೆ. ಅಲ್ಲಿದ್ದುಕೊಂಡು ಸುತ್ತಲಿನ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಕೆಲಸ ಮಾಡಲಿದ್ದಾರೆ ಎಂದರು.
ಮಸ್ಕಿ ಹಾಗೂ ಬಸವ ಕಲ್ಯಾಣದಲ್ಲಿ ಬಿಜೆಪಿ ಈಗಾಗಲೇ ಗೆದ್ದಾಗಿದೆ. ಬೆಳಗಾವಿಯಲ್ಲಿ ಗೆಲ್ಲುವ ಸಿದ್ಧತೆ ಮಾಡಿಕೊಳ್ಳುತ್ತಿರುವುದಾಗಿ ಯಡಿಯೂರಪ್ಪ ಹೇಳಿದರು.
ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನತೆ ಮೆಚ್ಚಿಕೊಂಡಿದ್ದು, ಉಪ ಚುನಾವಣೆಗಳಲ್ಲಿ ಪಕ್ಷದ ಕೈ ಹಿಡಿಯಲಿದ್ದಾರೆ ಎಂದು ಸಿಎಂ ಭರವಸೆ ವ್ಯಕ್ತಪಡಿಸಿದರು.

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement