ಬಿಜೆಪಿಗೆ ಸೇರ್ಪಡೆಗೊಂಡ ಟಿಎಂಸಿ ಸಂಸದ ಸಿಸಿರ್‌ ಅಧಿಕಾರಿ

ಕೋಲ್ಕತ್ತ: ನಿರೀಕ್ಷೆಯಂತೆ ಪಶ್ಚಿಮ ಬಂಗಾಳ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುವೆಂದು ಅಧಿಕಾರಿ ಅವರ ತಂದೆ ಟಿಎಂಸಿ ಸಂಸದ ಸಿಸಿರ್‌ ಅಧಿಕಾರಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಎಗ್ರಾದಲ್ಲಿ ನಡೆದ ಗೃಹ ಸಚಿವ ಅಮಿತ್‌ ಶಾ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಬಿಜೆಪಿಗೆ ಸೇರ್ಪಡೆಗೊಂಡು ಮಾತನಾಡಿ, ಬಂಗಾಳವನ್ನು ದೌರ್ಜನ್ಯದಿಂದ ರಕ್ಷಿಸಲು ಬಿಜೆಪಿ ಅಧಿಕಾರಕ್ಕೆ ತರುವುದು ಅಗತ್ಯವಾಗಿದೆ ಎಂದರು.
ದುಷ್ಟ ಟಿಎಂಸಿ ಸರ್ಕಾರದಿಂದ ಜನತೆಗೆ ಮುಕ್ತಿ ದೊರೆಯಬೇಕಿದೆ. ಬಿಜೆಪಿಯಿಂದ ಮಾತ್ರ ರಾಜ್ಯದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಾಧ್ಯ ಎಂದು ಸಿಸಿರ್ ಅಧಿಕಾರಿ ಹೇಳಿದರು. ಪಶ್ಚಿಮ ಬಂಗಾಳದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಅಧಿಕಾರಕ್ಕೆ ಬರುವುದು ಅತ್ಯವಶ್ಯವಾಗಿದೆ. ಹೀಗಾಗಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಾಯಕತ್ವದ ಮೇಲೆ ಭರವಸೆ ಇಟ್ಟು ಬಿಜೆಪಿ ಸೇರುತ್ತಿರುವುದಾಗಿ ಸಿಸಿರ್ ಅಧಿಕಾರಿ ಸ್ಪಷ್ಟಪಡಿಸಿದರು.
ಇದೇ ವೇಳೆ ವೇದಿಕೆ ಮೇಲೆ ಜೈ ಸೀಯಾ ರಾಮ್ ಹಾಗೂ ಜೈ ಭಾರತ್ ಎಂದು ಘೋಷಣೆಗಳನ್ನು ಕೂಗಿದ ಸಿಸರ್ ಅಧಿಕಾರಿ, ಮಮತಾ ಬ್ಯಾನರ್ಜಿ ದುರಾಡಳಿತಕ್ಕೆ ಅಂತ್ಯ ಹಾಡುವ ಸಮಯ ಬಂದಿದೆ ಎಂದು ಗುಡುಗಿದರು.
ಸಿಸಿರ್ ಅಧಿಕಾರಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅಮಿತ್ ಶಾ, ಜ್ಯೂನಿಯರ್ ಅಧಿಕಾರಿ ಸೇರ್ಪಡೆಯಿಂದ ಉತ್ಸಾಹ ಪಡೆದಿದ್ದ ಪಕ್ಷ ಇದೀಗ ಸಿನಿಯರ್ ಅಧಿಕಾರಿ ಸೇರ್ಪಡೆಯಿಂದ ಮತ್ತಷ್ಟು ಗಟ್ಟಿಯಾಗಿದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ: ಈ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗೇ ಮತ ಹಾಕಬೇಡಿ ಎಂದು ಮತದಾರರಿಗೆ ಮನವಿ ಮಾಡುತ್ತಿರುವ ಕಾಂಗ್ರೆಸ್‌...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement