ಬೇರೆ ತನಿಖಾ ಸಂಸ್ಥೆಗೆ ಸಿಡಿ ಪ್ರಕರಣ ವಹಿಸುವುದಿಲ್ಲ: ಬೊಮ್ಮಾಯಿ

ಧಾರವಾಡ: ಸಿಡಿ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್ ಐ ಟಿ) ಸಮರ್ಥವಾಗಿ  ನಡೆಸುತ್ತಿದೆ. ಹೀಗಾಗಿ  ಈ  ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆ ಗೆ‌ ವಹಿಸುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಭಾನುವಾರ ಧಾರವಾಡದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,  ಎಸ್ ಐ ಟಿ ಸಿಡಿ ತನಿಖೆಯನ್ನು ನಿಷ್ಪಕ್ಷಪಾತ ಹಾಗೂ ನ್ಯಾಯಸಮ್ಮತವಾಗಿ ನಡೆಸುತ್ತಿದೆ ಎಂದು ತಿಳಿಸಿದರು.

ಕೋಟ್
ಎರಡು ವಿಧಾನಸಭೆ ಹಾಗೂ ಒಂದು ಲೋಕಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಆಗಿದೆ. ಈ‌ ಮೂರು  ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರಿ ಮತಗಳ ಅಂತರದಿಂದ ದಾಖಲೆ ಮತಗಳಿಂದ ಜಯ ಗಳಿಸಲಿದ್ದಾರೆ. 

– ಬಸವರಾಜ ಬೊಮ್ಮಾಯಿ

ಹೊರ ರಾಜ್ಯಗಳಲ್ಲಿ ಕೋವಿಡ್ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕಟ್ಟು ನಿಟ್ಟಾಗಿ ಅನುಸರಿಸಲಾಗುತ್ತಿದೆ. ಶಾಲಾ ಕಾಲೇಜುಗಳ ವಿಚಾರದಲ್ಲಿ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತವೆ. ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಬಗ್ಗೆ ಇದುವರೆಗೆ ಚರ್ಚೆ ಆಗಿಲ್ಲ. ಬದಲಿಗೆ ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದರು.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ: ಸಿಎಂ ಸಿದ್ದರಾಮಯ್ಯ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement