ಬೆಂಗಳೂರು: ಸಿಡಿ ಪ್ರಕರಣದಲ್ಲಿ ಹಣದ ವಹಿವಾಟು ನಡೆದಿದೆ ಎಂಬ ಹೇಳಿಕೆ ಹಿನ್ನೆಲೆಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯಕ್ಕೆ ದೂರು ದಾಖಲಾಗಿದೆ.
ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಪ್ರಧಾನ ಕಾರ್ಯದರ್ಶಿಯವರು ರಮೇಶ್ ಜಾರಕಿಹೊಳಿ ವಿರುದ್ಧ ಇಡಿಗೆ ದೂರು ನೀಡಿದ್ದಾರೆ.
ಮಾ.9ರಂದು ಶಾಸಕ ರಮೇಶ್ ಜಾರಕಿಹೊಳಿ , ಸಿಡಿ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸಲು ಸುಮಾರು 5ರಿಂದ 20 ಕೋಟಿ ಹಾಗೂ 100 ಕೋಟಿ ವರೆಗೂ ಹಣದ ವಹಿವಾಟು ನಡೆದಿದ್ದು, ದೃಶ್ಯದಲ್ಲಿರುವ ಯುವತಿಗೆ 2 ಫ್ಲ್ಯಾಟ್ ಗಳನ್ನು ಕೊಡಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಬಹಿರಂಗ ಹೇಳಿಕೆ ನೀಡಿದ್ದರು.
ಆದ್ದರಿಂದ ಹಣದ ವಹಿವಾಟಿನ ಕುರಿತು ತನಿಖೆ ನಡೆಸಿ, 2002ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ