ಸಿಡಿ : ತಡೆಯಾಜ್ಞೆ ತಂದ ಸಚಿವರ ವಿರುದ್ಧ ತನಿಖೆಗೆ ಒತ್ತಾಯಿಸಿ ಕೋರ್ಟ್ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧಾರ

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾನಹಾನಿ ತಡೆ ಕೋರಿ ಕೋರ್ಟ್ ಮೆಟ್ಟಿಲೇರಿರುವ ಬಿಜೆಪಿ ಸರ್ಕಾರದ ಸಚಿವರ ವಿರುದ್ಧ ತನಿಖೆಗೆ ಆಗ್ರಹಿಸಿ ನ್ಯಾಯಾಲಯದ ಮೆಟ್ಟಿಲೇರಲು ಕಾಂಗ್ರೆಸ್ ನಿರ್ಧರಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆ ಕೋರಿ ಬಿಜೆಪಿ ಸರ್ಕಾರದ ಸಚಿವ ಸಂಪುಟದ ಆರು ಸಚಿವರು ನ್ಯಾಯಾಲಯದಿಂದ ಮಧ್ಯಂತರ ತಡೆಯಾಜ್ಞೆ ತಂದಿದ್ದಾರೆ. ಇವರ ವಿರುದ್ಧ ತನಿಖೆಗೆ ಆಗ್ರಹಿಸಿ ನ್ಯಾಯಾಲಯದ ಮೆಟ್ಟಿಲೇರಲು ನಿರ್ಧರಿಸಲಾಗಿದೆ. ಈ ಕುರಿತು ಕಾನೂನು ತಜ್ಞರಿಂದ ಸಲಹೆ ಪಡೆಯಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಆರೋಗ್ಯ ಸಚಿವ ಸುಧಾಕರ್ ಅವರ ಏಕಪತ್ನಿ ವ್ರತಸ್ಥ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಸಚಿವರಾಗಿರುವ ಡಾ.
ಸುಧಾಕರ್‌ ಉದ್ಧಟತನದ ಮಾತನ್ನು ಆಡಿದ್ದಾರೆ. 225 ಶಾಸಕರ ಮೇಲೆಯು ಮೇಲೆ ಸಂಶಯ ಬರುವಂತೆ ಮಾತನ್ನಾಡಿದ್ದಾರೆ. ಮನೆಯಲ್ಲೂ ಕುಟುಂಬಸ್ಥರಿಗೆ ಸಂಶಯ ಬರುವಂತಹ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಮೇಲೂ ಸಂಶಯ ಮೂಡುವಂತೆ ಹೇಳಿಕೆ ನೀಡಿದ್ದಾರೆ. ಇದೆಲ್ಲ ಬೇಜವಾಬ್ದಾರಿತನದ ಹೇಳಿಕೆ ಎಂದು ವಾಗ್ದಾಳಿ ನಡೆಸಿದರು.
225 ಶಾಸಕರಲ್ಲಿ ಹೆಣ್ಣು ಮಕ್ಕಳೂ ಇದ್ದಾರೆ. ಅವರಿಗೆಲ್ಲ ಇಂಥ ಹೇಳಿಕೆಯಿಂದ ಏನಾಗಬೇಡ? ಸ್ವಲ್ಪವೂ ಜವಾಬ್ದಾರಿ ಬೇಡವೇ.? ಹೀಗಾಗಿ ಸುಧಾಕರ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಸುಧಾಕರ್ ಸೇರಿದಂತೆ ಆರು ಜನ ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದೇವೆ. ಇವರ ಸಿಡಿಗಳು ಇವೆಯೆಂದು ಹೆಸರಿ ಕೋರ್ಟಿಗೆ ಹೋಗಿ ಮಧ್ಯಂತರ ತಡೆಯಾಜ್ಞೆ ತಂದಿದ್ದಾರೆ. ಇವರು ಸದನದ ಹಕ್ಕುಚ್ಯುತಿ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement