ಬೆಂಗಳೂರು: ರಮೇಶ್ ಜಾರಕಿಹೊಳಿ ಪ್ರಕರಣದ ಸಿಡಿ ಮಹಿಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಬಳಿ ರಕ್ಷಣೆ ಕೋರಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಆ ಬಗ್ಗೆ ಅವರಿಂದಲೇ ಮಾಹಿತಿ ಪಡೆಯಿರಿ ಎಂದು ಗೃಹ , ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. .
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಐಟಿ ತನಿಖೆ ನಡೆಯುತ್ತಿರುವಾಗ ಹಲವು ತಿರುವುಗಳು ಎದುರಾಗುತ್ತವೆ. ಹಲವು ಬೆಳವಣಿಗೆಗಳು ನಡೆಯುತ್ತವೆ. ಆದರೆ ಎಸ್ಐಟಿ ತನಿಖೆ ಯಾರ ಪರವಾಗಿಯೂ ಇಲ್ಲ. ಯಾರ ವಿರುದ್ಧವಾಗಿಯೂ ಇಲ್ಲ . ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದರು.
ಆ ಮಹಿಳೆಗೆ ರಕ್ಷಣೆ ನೀಡಲು ಪೊಲೀಸ್ ಇಲಾಖೆ ಸಿದ್ಧವಿದೆ. ಆ ಮಹಿಳೆ ಎಲ್ಲಿದ್ದಾಳೆ ಎಂಬುದನ್ನು ತಿಳಿಸಿದರೆ ಅವರ ಬಳಿಯೇ ಹೋಗಿ ನಾವು ಹೇಳಿಕೆಯನ್ನು ಪಡೆದುಕೊಳ್ಳುತ್ತದೆ ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದರು.
ನಿಮ್ಮ ಕಾಮೆಂಟ್ ಬರೆಯಿರಿ