ತಮ್ಮ ವಿರುದ್ಧ ತನಿಖೆ ಮಾಡುವಂತೆ ಸಿಎಂ ಠಾಕ್ರೆಗೆ ಪತ್ರ ಬರೆದ ಅನಿಲ ದೇಶ್ಮುಖ್‌

ಮುಂಬೈ; ಭ್ರಷ್ಟಾಚಾರದ ಆರೋಪದ ಬಗ್ಗೆ ಪ್ರತಿಪಕ್ಷಗಳು ಮಹಾರಾಷ್ಟ್ರ ಅಘಾಡಿ ಸರ್ಕಾರದ ಗೃಹ ಸಚಿವ ರಾಜೀನಾಮೆಗೆ ಪಟ್ಟು ಹಿಡಿದಿರುವ ಬೆನ್ನಲ್ಲೇ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದಾರೆ.
ಈ ಪತ್ರವನ್ನು ಬುಧವಾರ ಮಧ್ಯರಾತ್ರಿಯ ನಂತರ ದೇಶ್ಮುಖ್ ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದು, ಮುಂಬೈನ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬೀರ್ ಸಿಂಗ್ ತಮ್ಮ ಮೇಲೆ ಹೊರಿಸಿರುವ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಾವರು ಮುಖ್ಯಮಂತ್ರಿ ಠಾಕ್ರೆ ಅವರನ್ನು ಕೇಳಿಕೊಂಡಿದ್ದಾರೆ.
(ಮುಂಬೈನ ಮಾಜಿ ಪೊಲೀಸ್ ಆಯುಕ್ತ) ಪರಮ್ ಬೀರ್ ಸಿಂಗ್ ಅವರು ನನ್ನ ಮೇಲೆ ಮಾಡಿರುವ ಆರೋಪಗಳ ಬಗ್ಗೆ ಸತ್ಯ ಹೊರತರುವಂತೆ ನಾನು ಮುಖ್ಯಮಂತ್ರಿ ಅವರನ್ನು ಕೇಳಿದ್ದೇನೆ” ಎಂದು ಮರಾಠಿಯಲ್ಲಿ ಅವರು ಟ್ವೀಟ್ ಮಾಡಿದ್ದಾರೆ.
“ಮುಖ್ಯಮಂತ್ರಿ ಈ ವಿಷಯದ ಬಗ್ಗೆ ತನಿಖೆ ಮಾಡಿದರೆ ನಾನು ಅದನ್ನು ಸ್ವಾಗತಿಸುತ್ತೇನೆ. ಸತ್ಯಮೇವ್ ಜಯತೆ” ಎಂದು ಅವರು ಹೇಳಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement