ದೇಗುಲ ಸಿಬ್ಬಂದಿಗೆ ಸಂತಸದ ಸುದ್ದಿ ನೀಡಿದ ಸಚಿವ ಪೂಜಾರಿ

ಮೈಸೂರು : ದೇಗುಲ ಸಿಬ್ಬಂದಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಂತಸದ ಸುದ್ದಿ ನೀಡಿದ್ದಾರೆ.
ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ದೇಗುಲ ಸಿಬ್ಬಂದಿಗೆ ಶೀಘ್ರದಲ್ಲೇ 6ನೇ ವೇತನ ಶ್ರೇಣಿ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಗುಲ ಸಿಬ್ಬಂದಿಗೆ 6ನೇ ವೇತನ ಶ್ರೇಣಿ ಜಾರಿಗೆ ಕೆಲವೊಂದು ಅಡಚಣೆಗಳಿವೆ. ಈ ಅಡಚಣೆಗಳ ಪರಿಹಾರಕ್ಕೆ ಅಂತಿಮ ರೂಪ ನೀಡಲಾಗಿದೆ. ಏಪ್ರಿಲ್ 9 ರಂದು ನಡೆಯಲಿರುವ ರಾಜ್ಯ ಧಾರ್ಮಿಕ ಪರಿಷತ್ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಅರ್ಚಕರಿಗೆ ಆರೋಗ್ಯ ವಿಮೆ, ಜೀವ ವಿಮೆ ಹಾಗೂ ಪಿಂಚಣಿ ಸೌಲಭ್ಯ ನೀಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೊತೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

5 / 5. 3

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

ನಿಮ್ಮ ಕಾಮೆಂಟ್ ಬರೆಯಿರಿ

advertisement